ಬ್ರೇಕಿಂಗ್ ನ್ಯೂಸ್
10-02-24 05:48 pm Bangalore Correspondent ಕ್ರೈಂ
ಬೆಂಗಳೂರು, ಫೆ.10: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್ಬಿಐ ಹೆಸರನ್ನು ಬಳಸಿಕೊಂಡು, ಹತ್ತು ಲಕ್ಷ ರೂ.ಗಳಿಗೆ ಐದು ಲಕ್ಷ ರೂ.ಸಬ್ಸಿಡಿ ನೀಡುವುದಾಗಿ ಜನರಿಗೆ ನಂಬಿಸಿ ಕೋಟ್ಯಂತರ ರೂ. ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಆರೋಪದ ಪ್ರಕರಣ ಆನೇಕಲ್ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಎಂಬವವರು ಈ ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ.
ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಜನರಿಗೆ ವಂಚಿಸಿರುವ ಪವಿತ್ರಾ, ಟ್ರಸ್ಟ್ಗೆ ಆರ್ಬಿಐನಿಂದ 17 ಕೋಟಿ ರೂ. ಬಂದಿರುವುದಾಗಿ ಮೊದಲು ಜನರಿಗೆ ನಂಬಿಸಿದ್ದಾಳೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಹಿ ಇರುವಂತೆ ನಕಲಿ ಪತ್ರ ಸೃಷ್ಟಿಸಿಕೊಂಡು ಅದನ್ನು ತೋರಿಸಿದ್ದಾಳೆ.
ಕಂತೆ ಕಂತೆ ಹಣದ ನೋಟುಗಳ ವೀಡಿಯೊಗಳನ್ನು ಕಳುಹಿಸಿ ಜನರನ್ನು ನಂಬಿಸಿ ಸುಲಭವಾಗಿ ಸಾಲ ಕೊಡುತ್ತೇನೆ. ಒಬ್ಬರಿಗೆ ಹತ್ತು ಲಕ್ಷ ರೂ. ಸಾಲ ನೀಡಿದರೆ ಅದರಲ್ಲಿ ಐದು ಲಕ್ಷ ರೂ. ಸಬ್ಸಿಡಿ ಎಂದು ಹೇಳಿದ್ದಾಳೆ. ಆದರೆ ಸಾಲ ಕೊಡುವುದಕ್ಕೂ ಮೊದಲು ಹಣ ಹೂಡಿಕೆ ಮಾಡಬೇಕು ಎಂದು ತಿಳಿಸಿದ್ದಾಳೆ ಎನ್ನಲಾಗಿದೆ.
ಪವಿತ್ರಾಳ ಮಾತನ್ನು ನಂಬಿದ ಜನರು ಒಂದು ಗುಂಪು ಮಾಡಿಕೊಂಡು ಈಕೆಗೆ ಲಕ್ಷಾಂತರ ರೂ.ಗಳನ್ನು ನೀಡಿದ್ದು, ತಿಂಗಳುಗಳು ಕಳೆದರೂ ಸಾಲ ಬಾರದೆ ಇದ್ದಾಗ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ಪವಿತ್ರಾ ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಮಾಯಸಂದ್ರದ ನಿವಾಸಿ ರತ್ನಮ್ಮ ಎಂಬವರು ಪವಿತ್ರಾ ವಿರುದ್ಧ ವಂಚನೆ ಕುರಿತು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ಆರೋಪಿ ಪವಿತ್ರಾ ಹಾಗೂ ಆಕೆಯ ಸಹಚರರಾದ ಪ್ರವೀಣ್, ಯಲ್ಲಪ್ಪ, ಶೀಲಾ, ರುಕ್ಮಿಣಿ, ರಾಧಾ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಮಾರ್ಟಿನ್, ಹೇಮಲತಾ, ಶಾಲಿನಿ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
In yet another scam, a woman from Tamil Nadu has deceived numerous people, extracting lakhs of rupees under the guise of providing loans. Pavitra, a resident of Hosur, is the prime accused in this fraud, which exploited the name of Union Finance Minister Nirmala Sitharaman and purported affiliations with the Reserve Bank of India (RBI).
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm