ಬ್ರೇಕಿಂಗ್ ನ್ಯೂಸ್
10-02-24 05:48 pm Bangalore Correspondent ಕ್ರೈಂ
ಬೆಂಗಳೂರು, ಫೆ.10: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್ಬಿಐ ಹೆಸರನ್ನು ಬಳಸಿಕೊಂಡು, ಹತ್ತು ಲಕ್ಷ ರೂ.ಗಳಿಗೆ ಐದು ಲಕ್ಷ ರೂ.ಸಬ್ಸಿಡಿ ನೀಡುವುದಾಗಿ ಜನರಿಗೆ ನಂಬಿಸಿ ಕೋಟ್ಯಂತರ ರೂ. ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಆರೋಪದ ಪ್ರಕರಣ ಆನೇಕಲ್ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಎಂಬವವರು ಈ ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ.
ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಜನರಿಗೆ ವಂಚಿಸಿರುವ ಪವಿತ್ರಾ, ಟ್ರಸ್ಟ್ಗೆ ಆರ್ಬಿಐನಿಂದ 17 ಕೋಟಿ ರೂ. ಬಂದಿರುವುದಾಗಿ ಮೊದಲು ಜನರಿಗೆ ನಂಬಿಸಿದ್ದಾಳೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಹಿ ಇರುವಂತೆ ನಕಲಿ ಪತ್ರ ಸೃಷ್ಟಿಸಿಕೊಂಡು ಅದನ್ನು ತೋರಿಸಿದ್ದಾಳೆ.
ಕಂತೆ ಕಂತೆ ಹಣದ ನೋಟುಗಳ ವೀಡಿಯೊಗಳನ್ನು ಕಳುಹಿಸಿ ಜನರನ್ನು ನಂಬಿಸಿ ಸುಲಭವಾಗಿ ಸಾಲ ಕೊಡುತ್ತೇನೆ. ಒಬ್ಬರಿಗೆ ಹತ್ತು ಲಕ್ಷ ರೂ. ಸಾಲ ನೀಡಿದರೆ ಅದರಲ್ಲಿ ಐದು ಲಕ್ಷ ರೂ. ಸಬ್ಸಿಡಿ ಎಂದು ಹೇಳಿದ್ದಾಳೆ. ಆದರೆ ಸಾಲ ಕೊಡುವುದಕ್ಕೂ ಮೊದಲು ಹಣ ಹೂಡಿಕೆ ಮಾಡಬೇಕು ಎಂದು ತಿಳಿಸಿದ್ದಾಳೆ ಎನ್ನಲಾಗಿದೆ.
ಪವಿತ್ರಾಳ ಮಾತನ್ನು ನಂಬಿದ ಜನರು ಒಂದು ಗುಂಪು ಮಾಡಿಕೊಂಡು ಈಕೆಗೆ ಲಕ್ಷಾಂತರ ರೂ.ಗಳನ್ನು ನೀಡಿದ್ದು, ತಿಂಗಳುಗಳು ಕಳೆದರೂ ಸಾಲ ಬಾರದೆ ಇದ್ದಾಗ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ಪವಿತ್ರಾ ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಮಾಯಸಂದ್ರದ ನಿವಾಸಿ ರತ್ನಮ್ಮ ಎಂಬವರು ಪವಿತ್ರಾ ವಿರುದ್ಧ ವಂಚನೆ ಕುರಿತು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ಆರೋಪಿ ಪವಿತ್ರಾ ಹಾಗೂ ಆಕೆಯ ಸಹಚರರಾದ ಪ್ರವೀಣ್, ಯಲ್ಲಪ್ಪ, ಶೀಲಾ, ರುಕ್ಮಿಣಿ, ರಾಧಾ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಮಾರ್ಟಿನ್, ಹೇಮಲತಾ, ಶಾಲಿನಿ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
In yet another scam, a woman from Tamil Nadu has deceived numerous people, extracting lakhs of rupees under the guise of providing loans. Pavitra, a resident of Hosur, is the prime accused in this fraud, which exploited the name of Union Finance Minister Nirmala Sitharaman and purported affiliations with the Reserve Bank of India (RBI).
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm