ಬ್ರೇಕಿಂಗ್ ನ್ಯೂಸ್
26-02-24 12:19 pm Bangalore Correspondent ಕ್ರೈಂ
ಬೆಂಗಳೂರು, ಫೆ 26: ಒಂಟಿಯಾಗಿ ನೆಲೆಸಿದ್ದ ವೃದ್ಧೆಯ ಕೈ, ಕಾಲು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗಳು ಶವವನ್ನು ಡ್ರಮ್ನಲ್ಲಿ ತುಂಬಿ ಬೀದಿಗೆ ಬಿಸಾಡಿ ಪರಾರಿಯಾಗಿದ್ದಾರೆ. ಹಣಕಾಸಿನ ವಿಚಾರಕ್ಕೆ ಪರಿಚಯಸ್ಥರೇ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕೆ.ಆರ್. ಪುರದ ನಿಸರ್ಗ ಲೇಔಟ್ ನಿವಾಸಿ ಸುಶೀಲಮ್ಮ (65) ಮೃತ ವೃದ್ಧೆ. ಈ ಸಂಬಂಧ ವೃದ್ಧೆಯ ಪರಿಚಿತ ದಿನೇಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಸರ್ಗ ಲೇಔಟ್ನ ಮನೆಗಳ ಓಣಿಯಲ್ಲಿ ಅನಾಥವಾಗಿ 10 ಲೀಟರ್ ಸಾಮರ್ಥ್ಯದ ಡ್ರಮ್ ಇಟ್ಟಿರುವುದನ್ನು ಗಮನಿಸಿದ ಸ್ಥಳೀಯರು, ಅದರ ಬಳಿ ಹೋಗಿ ನೋಡಿದಾಗ ಶವ ಪತ್ತೆಯಾಗಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಸುಶೀಲಮ್ಮ, 10 ವರ್ಷಗಳಿಂದ ನಿಸರ್ಗ ಲೇಔಟ್ನಲ್ಲಿ ನೆಲೆಸಿದ್ದರು. ವೃದ್ಧೆಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆಸ್ತಿ ಮಾರಾಟದಲ್ಲಿ ಬಂದ ಹಣದಲ್ಲಿ 8 ಲಕ್ಷ ರೂ.ಗೆ ಮನೆ ಬೋಗ್ಯಕ್ಕೆ ಪಡೆದು, ಮಕ್ಕಳಿಂದ ಪ್ರತ್ಯೇಕವಾಗಿ ಅಜ್ಜಿ ವಾಸವಾಗಿದ್ದರು.
ಅದೇ ಕಟ್ಟಡದಲ್ಲಿ ಅವರ ಕಿರಿಯ ಪುತ್ರಿ ಮತ್ತು ಸಮೀಪದಲ್ಲೇ ಮಗ ನೆಲೆಸಿದ್ದ. ಪುತ್ರ ಪ್ರತಿ ತಿಂಗಳು ತಾಯಿಗೆ 2-3 ಸಾವಿರ ರೂ. ನೀಡುತ್ತಿದ್ದರು. ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿದ್ದ ಸುಶೀಲಮ್ಮ, ಚುನಾವಣಾ ಪ್ರಚಾರ ಸಹ ನಡೆಸಿದ್ದರು. ಈ ವೇಳೆ ದಿನೇಶ್ ಎಂಬಾತನ ಪರಿಚಯವಾಗಿದ್ದು, ಆಗಾಗ್ಗೆ ಅಜ್ಜಿಗೆ ಮನೆಗೆ ಬಂದು ಹೋಗುತ್ತಿದ್ದ. ಈ ಹತ್ಯೆಗೆ ನಿಖರವಾಗಿ ಕಾರಣ ಗೊತ್ತಾಗಿಲ್ಲ.
ಹಣಕ್ಕಾಗಿ ದಿನೇಶ್ ಕೃತ್ಯ ಎಸಗಿರುವ ಶಂಕೆ ಇದೆ. ಮನೆಯಲ್ಲಿ ಅಜ್ಜಿ ಜೊತೆ ದಿನೇಶ್ ಮಾತನಾಡುತ್ತ ನಿಂತಿದ್ದ ದೃಶ್ಯವನ್ನು ಮೊಮ್ಮಗಳು ನೋಡಿದ್ದಳು. ಇದಾದ ಬಳಿಕ ಅಜ್ಜಿಯ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ಪೊಲೀಸರು ದಿನೇಶ್ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತ, ವೈಟ್ಫೀಲ್ಡ್ ಡಿಸಿಪಿ ಶಿವಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೆ.ಆರ್.ಪುರ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
65 year old elderly woman murdered in Bangalore, body found inside drum. Police have taken 1 into custody and have been investigating the case.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm