ಬ್ರೇಕಿಂಗ್ ನ್ಯೂಸ್
27-02-24 03:45 pm HK News Desk ಕ್ರೈಂ
ಮಂಡ್ಯ, ಫೆ 27: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ನಂಜಪ್ಪ ತಮ್ಮ ಜಮೀನನ್ನು ಮಗನಿಗೆ ಹಾಗೂ ಮಗಳಿಗೆ ಹಂಚಿದ್ದರು. ಇತ್ತೀಚೆಗೆ 20 ಗುಂಟೆ ಜಮೀನನ್ನು ಮಾರಾಟ ಮಾಡಿ, ಬಂದ ಹಣದಲ್ಲಿ ಒಂದು ಭಾಗ ಮಗನಿಗೆ, ಒಂದು ಭಾಗ ಮಗಳು ಸೌಭಾಗ್ಯ ಎಂಬವರಿಗೆ ನೀಡಿದ್ದರು. ಸ್ವಲ್ಪ ಹಣವನ್ನು ನಂಜಪ್ಪ ಅವರು ಇಟ್ಟುಕೊಂಡಿದ್ದರು. ಆರೋಪಿ ಮಹದೇವ್ ತಂದೆ ನೀಡಿದ್ದ ಹಣ ಖರ್ಚು ಮಾಡಿಕೊಂಡು, ತಂದೆಯ ಬಳಿ ಹಣಕ್ಕಾಗಿ ಆಗಾಗ ಜಗಳ ಆಡುತ್ತಿದ್ದ ಎಂದು ತಿಳಿದು ಬಂದಿದೆ.
ಹಣದ ವಿಚಾರಕ್ಕೆ ಸೋಮವಾರ ರಾತ್ರಿ ಸಹ ತಂದೆಯ ಮನೆಗೆ ನುಗ್ಗಿ, ತಂದೆ-ತಾಯಿಗಳ ಮೇಲೆ ಮಹದೇವ್ ಹಲ್ಲೆ ಮಾಡಿದ್ದಾನೆ. ಬಳಿಕ ತಂದೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ತಾಯಿ ಮಹದೇವಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Mandya murder, son fills own father over money and flees away. Mandya police are now on the hunt for the missing son.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm