ಬ್ರೇಕಿಂಗ್ ನ್ಯೂಸ್
28-02-24 03:45 pm Bangalore Correspondent ಕ್ರೈಂ
ಬೆಂಗಳೂರು, ಫೆ.28: ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ಮೂಲಕ ಬರೋಬ್ಬರಿ 250ಕ್ಕೂ ಹೆಚ್ಚು ಮಹಿಳೆಯರು, ಯುವತಿಯರನ್ನು ಸಂಪರ್ಕಿಸಿ ಮದುವೆಯಾಗೋದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ನರೇಶ್ ಪುರಿ ಗೋಸ್ವಾಮಿ ಎಂಬಾತ ಸಿಕ್ಕಿಬಿದ್ದಿದ್ದಾನೆ.
ಮ್ಯಾಟ್ರಿಮೊನಿಯಲ್ ವೆಬ್ಸೈಟ್ಗಳಲ್ಲಿ ನಕಲಿ ಖಾತೆ ಸೃಷ್ಟಿಸಿಕೊಂಡು, ವಿಧವೆ, ವಿಚ್ಛೇದಿತ ಮಹಿಳೆಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ಬಳಿಕ ಬೆಂಗಳೂರಿಗೆ ಮಾತುಕತೆಗೆಂದು ಕರೆಸಿಕೊಳ್ತಿದ್ದು ವಂಚನೆ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ರೈಲ್ವೆ ಪೊಲೀಸರ ಕಾರ್ಯಚರಣೆ ನಡೆಸಿದ್ದು, ವಿಚಾರಣೆ ವೇಳೆ 250ಕ್ಕೂ ಹೆಚ್ಚು ಮಹಿಳೆಯರಿಗೆ- ಯುವತಿಯರಿಗೆ ಮದುವೆಯಾಗುವುದಾಗಿ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಯಮತ್ತೂರು ಮೂಲದ ಮಹಿಳೆಯೊಬ್ಬರನ್ನ ಮದುವೆ ಮಾತುಕತೆಗೆ ಬೆಂಗಳೂರಿಗೆ ಕರೆಸಿಕೊಂಡಿದ್ದ. ಈ ವೇಳೆ ಅವರು ಬೆಂಗಳೂರಿಗೆ ಬಂದ ವೇಳೆ ತನ್ನ ಮಾವನನ್ನು ಸ್ಟೇಷನ್ಗೆ ಕಳುಹಿಸುತ್ತಿದ್ದೇನೆ. ಅವರಿಗೆ ಟಿಕೆಟ್ ರಿಸರ್ವೇಷನ್ ಮಾಡಿಸಬೇಕಿರುವುದರಿಂದ ಪರ್ಸ್ ಮನೆಯಲ್ಲಿಯೇ ಬಿಟ್ಟು ಬಂದಿದ್ದಾರೆ ಎಂದು ಹಣ ಪಡೆದು ಎಸ್ಕೇಪ್ ಆಗಿದ್ದಾನೆ.
ವಿಚಾರಣೆ ವೇಳೆ ಆರೋಪಿ ರಾಜಸ್ಥಾನದ 56 , ಉತ್ತರ ಪ್ರದೇಶದ 32 , ದೆಹಲಿಯ 32 , ಕರ್ನಾಟಕದ 17, ಮಧ್ಯಪ್ರದೇಶದ 16, ಮಹಾರಾಷ್ಟ್ರ ದ 13, ಗುಜರಾತ್ 11 ಮಹಿಳೆಯರಿಗೆ ವಂಚನೆ ಮಾಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.
The Bengaluru Railway Police have arrested a man for allegedly duping more than 250 women and girls on the pretext of marrying them through a matrimonial website. Naresh Puri Goswami, who claimed to be an airport customs officer, was arrested.
13-08-26 10:19 pm
HK News Desk
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm