ಬ್ರೇಕಿಂಗ್ ನ್ಯೂಸ್
04-03-24 11:43 am Mangalore Correspondent ಕ್ರೈಂ
ಪುತ್ತೂರು, ಮಾ.4: ಕಾಲೇಜು ಆವರಣದಲ್ಲಿ ಕುಳಿತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಕೇರಳ ಮೂಲದ ವಿದ್ಯಾರ್ಥಿನಿ ಅಲೀನಾ ಸಿಬಿ, ಅರ್ಚನಾ, ಅಮೃತ ಆ್ಯಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯರು. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕ ಆ್ಯಸಿಡ್ ಎರಚಿದ್ದಾನೆ. ಆರೋಪಿ ಮಾಸ್ಕ್, ತಲೆಗೆ ಟೋಪಿ ಹಾಕಿದ್ದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.
ಕೂಡಲೇ ವಿದ್ಯಾರ್ಥಿನಿಯರನ್ನು ಕಡಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯನ್ನು ಬಳಿಕ ಸ್ಥಳೀಯರು ಸೇರಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಕೇರಳ ಮೂಲದ ಅಬಿನ್ ಎಂದು ಗುರುತಿಸಲಾಗಿದೆ. ಈತ ಕೇರಳದಲ್ಲಿ ಎಂಬಿಎ ಓದುತ್ತಿದ್ದು ಕಡಬಕ್ಕೆ ಬಂದು 17 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಮಾಡಿದ್ದಾನೆ. ಒಬ್ಬ ವಿದ್ಯಾರ್ಥಿನಿ ಆತನ ಟಾರ್ಗೆಟ್ ಆಗಿತ್ತು. ಜೊತೆಗೆ ಕುಳಿತಿದ್ದವರ ಮೇಲೆಯೂ ಏಸಿಡ್ ಬಿದ್ದಿದೆ. ಒಬ್ಬಳು ವಿದ್ಯಾರ್ಥಿನಿಯ ದೇಹಕ್ಕೆ ಹೆಚ್ಚು ಸುಟ್ಟ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ದ.ಕ. ಎಸ್ಪಿ ರಿಷ್ಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮುಖದ ಭಾಗ ಸುಟ್ಟು ಹೋಗಿದೆ. ಒಬ್ಬಳು ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವನ್ ಸೈಡ್ ಪ್ರೀತಿಯ ಕಾರಣಕ್ಕೆ ಏಸಿಡ್ ದಾಳಿ ಮಾಡಿದ್ದಾನೆಂದು ಹೇಳಲಾಗುತ್ತಿದೆ.
Three Pre-University students were attacked with acid on Monday when they were inside their college in Kadaba of Dakshina Kannada district. The students are being treated at the local hospital and will shifted to Mangaluru for further treatment. The police have arrested the accused.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm