ಬ್ರೇಕಿಂಗ್ ನ್ಯೂಸ್
04-03-24 11:43 am Mangalore Correspondent ಕ್ರೈಂ
ಪುತ್ತೂರು, ಮಾ.4: ಕಾಲೇಜು ಆವರಣದಲ್ಲಿ ಕುಳಿತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಕೇರಳ ಮೂಲದ ವಿದ್ಯಾರ್ಥಿನಿ ಅಲೀನಾ ಸಿಬಿ, ಅರ್ಚನಾ, ಅಮೃತ ಆ್ಯಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯರು. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕ ಆ್ಯಸಿಡ್ ಎರಚಿದ್ದಾನೆ. ಆರೋಪಿ ಮಾಸ್ಕ್, ತಲೆಗೆ ಟೋಪಿ ಹಾಕಿದ್ದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.



ಕೂಡಲೇ ವಿದ್ಯಾರ್ಥಿನಿಯರನ್ನು ಕಡಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯನ್ನು ಬಳಿಕ ಸ್ಥಳೀಯರು ಸೇರಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಕೇರಳ ಮೂಲದ ಅಬಿನ್ ಎಂದು ಗುರುತಿಸಲಾಗಿದೆ. ಈತ ಕೇರಳದಲ್ಲಿ ಎಂಬಿಎ ಓದುತ್ತಿದ್ದು ಕಡಬಕ್ಕೆ ಬಂದು 17 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಮಾಡಿದ್ದಾನೆ. ಒಬ್ಬ ವಿದ್ಯಾರ್ಥಿನಿ ಆತನ ಟಾರ್ಗೆಟ್ ಆಗಿತ್ತು. ಜೊತೆಗೆ ಕುಳಿತಿದ್ದವರ ಮೇಲೆಯೂ ಏಸಿಡ್ ಬಿದ್ದಿದೆ. ಒಬ್ಬಳು ವಿದ್ಯಾರ್ಥಿನಿಯ ದೇಹಕ್ಕೆ ಹೆಚ್ಚು ಸುಟ್ಟ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ದ.ಕ. ಎಸ್ಪಿ ರಿಷ್ಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮುಖದ ಭಾಗ ಸುಟ್ಟು ಹೋಗಿದೆ. ಒಬ್ಬಳು ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವನ್ ಸೈಡ್ ಪ್ರೀತಿಯ ಕಾರಣಕ್ಕೆ ಏಸಿಡ್ ದಾಳಿ ಮಾಡಿದ್ದಾನೆಂದು ಹೇಳಲಾಗುತ್ತಿದೆ.
Three Pre-University students were attacked with acid on Monday when they were inside their college in Kadaba of Dakshina Kannada district. The students are being treated at the local hospital and will shifted to Mangaluru for further treatment. The police have arrested the accused.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm