ಬ್ರೇಕಿಂಗ್ ನ್ಯೂಸ್
06-03-24 03:20 pm Bangalore Correspondent ಕ್ರೈಂ
ಬೆಂಗಳೂರು, ಮಾ 06: ಪ್ರತಿ ವರ್ಷದಂತೆ ಈ ಸಲವೂ ವೆಡ್ಡಿಂಗ್ ಆನಿವರ್ಸರಿಗೆ ಗಂಡ ಉಡುಗೊರೆ ಕೊಡಲಿಲ್ಲ ಎಂಬ ಕಾರಣಕ್ಕೆ ಮಲಗಿದ್ದ ಪತಿಗೆ ಆತನ ಪ್ರಿಯ ಪತ್ನಿ ಚಾಕುವಿನಿಂದ ಇರಿದ ಶಾಕಿಂಗ್ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು 37 ವರ್ಷ ವಯಸ್ಸಿನ ಕಿರಣ್ (ಹೆಸರು ಬದಲಿಸಲಾಗಿದೆ) ಎಂದು ಗುರ್ತಿಸಲಾಗಿದೆ. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ 35 ವರ್ಷ ವಯಸ್ಸಿನ ಸಂಧ್ಯಾ (ಹೆಸರು ಬದಲಿಸಲಾಗಿದೆ) ಗೃಹಿಣಿಯಾಗಿದ್ದು, ತಮ್ಮ ಪತಿ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎಸಗಿದ್ದಾರೆ.
37 ವರ್ಷದ ಗಾಯಾಳು ಪತಿಯ ಹೇಳಿಕೆ ಆಧರಿಸಿ, ಆತನ 35 ವರ್ಷ ವಯಸ್ಸಿನ ಪತ್ನಿಯ ವಿರುದ್ಧ ಬೆಳ್ಳಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಪ್ರತಿ ವರ್ಷ ವಿವಾಹ ವಾರ್ಷಿಕೋತ್ಸವದ ದಿನ ಪತ್ನಿಗೆ ಏನಾದರೂ ಗಿಫ್ಟ್ ನೀಡುತ್ತಿದ್ದೆ. ಆದರೆ, ಈ ವರ್ಷ ನನ್ನ ತಾತ ನಿಧನರಾಗಿದ್ದರಿಂದ ಹಿಂದಿನ ದಿನ ಗಿಫ್ಟ್ ಖರೀದಿಸಲು ಸಾಧ್ಯವಾಗಿರಲಿಲ್ಲ. ಅದೇ ಕೋಪದಲ್ಲಿದ್ದ ಪತ್ನಿ, ನಾನು ನಿದ್ದೆಗೆ ಜಾರಿದ್ದ ಸಮಯದಲ್ಲಿ ಚಾಕುವಿನಿಂದ ಇರಿದಿದ್ದಾಳೆ' ಎಂದು ಪತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ.
ಇರಿತದಿಂದ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಕು ಇರಿತ ಪ್ರಕರಣವಾದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರನ್ವಯ ಗಾಯಾಳುವಿನ ಹೇಳಿಕೆ ಪಡೆದುಕೊಂಡ ಬೆಳ್ಳಂದೂರು ಠಾಣೆ ಪೊಲೀಸರು, ಮಾರ್ಚ್ 1 ರಂದು ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸಂಧ್ಯಾ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಸಂಧ್ಯಾ ಅವರ ಬಳಿಕ ಹಲವು ಬಾರಿ ವಿಚಾರಣೆಯನ್ನೂ ನಡೆಸಲಾಗಿದೆ. ಅಂತಿಮವಾಗಿ ಇದು ಅಪರಾಧಿಕ ಕೃತ್ಯ ಎನ್ನುವುದಕ್ಕಿಂತಾ ಹೆಚ್ಚಾಗಿ ಕೌಟುಂಬಿಕ ಪ್ರಕರಣ ಆದ ಕಾರಣ ಗಂಡ - ಹೆಂಡತಿ ಇಬ್ಬರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಪೊಲೀಸರು ಅವಕಾಶ ನೀಡಿದ್ದಾರೆ.
Bangalore Wife stabs husband for not giving gift on wedding anniversary. Police have taken wife into custody and have sent her to counselling centre.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm