ಬ್ರೇಕಿಂಗ್ ನ್ಯೂಸ್
06-03-24 03:20 pm Bangalore Correspondent ಕ್ರೈಂ
ಬೆಂಗಳೂರು, ಮಾ 06: ಪ್ರತಿ ವರ್ಷದಂತೆ ಈ ಸಲವೂ ವೆಡ್ಡಿಂಗ್ ಆನಿವರ್ಸರಿಗೆ ಗಂಡ ಉಡುಗೊರೆ ಕೊಡಲಿಲ್ಲ ಎಂಬ ಕಾರಣಕ್ಕೆ ಮಲಗಿದ್ದ ಪತಿಗೆ ಆತನ ಪ್ರಿಯ ಪತ್ನಿ ಚಾಕುವಿನಿಂದ ಇರಿದ ಶಾಕಿಂಗ್ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು 37 ವರ್ಷ ವಯಸ್ಸಿನ ಕಿರಣ್ (ಹೆಸರು ಬದಲಿಸಲಾಗಿದೆ) ಎಂದು ಗುರ್ತಿಸಲಾಗಿದೆ. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ 35 ವರ್ಷ ವಯಸ್ಸಿನ ಸಂಧ್ಯಾ (ಹೆಸರು ಬದಲಿಸಲಾಗಿದೆ) ಗೃಹಿಣಿಯಾಗಿದ್ದು, ತಮ್ಮ ಪತಿ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎಸಗಿದ್ದಾರೆ.
37 ವರ್ಷದ ಗಾಯಾಳು ಪತಿಯ ಹೇಳಿಕೆ ಆಧರಿಸಿ, ಆತನ 35 ವರ್ಷ ವಯಸ್ಸಿನ ಪತ್ನಿಯ ವಿರುದ್ಧ ಬೆಳ್ಳಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಪ್ರತಿ ವರ್ಷ ವಿವಾಹ ವಾರ್ಷಿಕೋತ್ಸವದ ದಿನ ಪತ್ನಿಗೆ ಏನಾದರೂ ಗಿಫ್ಟ್ ನೀಡುತ್ತಿದ್ದೆ. ಆದರೆ, ಈ ವರ್ಷ ನನ್ನ ತಾತ ನಿಧನರಾಗಿದ್ದರಿಂದ ಹಿಂದಿನ ದಿನ ಗಿಫ್ಟ್ ಖರೀದಿಸಲು ಸಾಧ್ಯವಾಗಿರಲಿಲ್ಲ. ಅದೇ ಕೋಪದಲ್ಲಿದ್ದ ಪತ್ನಿ, ನಾನು ನಿದ್ದೆಗೆ ಜಾರಿದ್ದ ಸಮಯದಲ್ಲಿ ಚಾಕುವಿನಿಂದ ಇರಿದಿದ್ದಾಳೆ' ಎಂದು ಪತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ.
ಇರಿತದಿಂದ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಕು ಇರಿತ ಪ್ರಕರಣವಾದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರನ್ವಯ ಗಾಯಾಳುವಿನ ಹೇಳಿಕೆ ಪಡೆದುಕೊಂಡ ಬೆಳ್ಳಂದೂರು ಠಾಣೆ ಪೊಲೀಸರು, ಮಾರ್ಚ್ 1 ರಂದು ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸಂಧ್ಯಾ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಸಂಧ್ಯಾ ಅವರ ಬಳಿಕ ಹಲವು ಬಾರಿ ವಿಚಾರಣೆಯನ್ನೂ ನಡೆಸಲಾಗಿದೆ. ಅಂತಿಮವಾಗಿ ಇದು ಅಪರಾಧಿಕ ಕೃತ್ಯ ಎನ್ನುವುದಕ್ಕಿಂತಾ ಹೆಚ್ಚಾಗಿ ಕೌಟುಂಬಿಕ ಪ್ರಕರಣ ಆದ ಕಾರಣ ಗಂಡ - ಹೆಂಡತಿ ಇಬ್ಬರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಪೊಲೀಸರು ಅವಕಾಶ ನೀಡಿದ್ದಾರೆ.
Bangalore Wife stabs husband for not giving gift on wedding anniversary. Police have taken wife into custody and have sent her to counselling centre.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm