ಬ್ರೇಕಿಂಗ್ ನ್ಯೂಸ್
09-03-24 10:20 pm HK News Desk ಕ್ರೈಂ
ನವದೆಹಲಿ, ಮಾ.9: ವ್ಯಕ್ತಿಯೊಬ್ಬ ತನ್ನ ಪತ್ನಿ ತನ್ನನ್ನು ಕ್ಯಾರ್ ಮಾಡುತ್ತಿಲ್ಲ. ಉದ್ದೇಶಪೂರ್ವಕ ದೂರ ಮಾಡುತ್ತಿದ್ದಾಳೆ, ಮಗನ ಜೊತೆ ಐಷಾರಾಮಿ ಜೀವನ ಮಾಡುತ್ತಿದ್ದಾಳೆಂಬ ಹೊಟ್ಟೆಕಿಚ್ಚಿನಿಂದಾಗಿ ಜಿಮ್ ಟ್ರೈನರ್ ಆಗಿದ್ದ ಮಗನನ್ನೇ ಕ್ರೂರವಾಗಿ ಕೊಲೆ ಮಾಡಿಸಿದ ಘಟನೆ ರಾಜಧಾನಿ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಫೆ.6-7ರ ರಾತ್ರಿ ದೆಹಲಿಯ ಅಪಾರ್ಟ್ಮೆಂಟ್ ಒಂದರಲ್ಲಿ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಗೌರವ್ ಸಿಂಘಾಲ್ ಎಂಬ 29 ವರ್ಷದ ಯುವಕ 15ಕ್ಕೂ ಹೆಚ್ಚು ಬಾರಿ ಇರಿಯಲ್ಪಟ್ಟು ಕೊಲ್ಲಲ್ಪಟ್ಟಿದ್ದ. ತನಿಖೆ ನಡೆಸಿದ ಪೊಲೀಸರು ಘಟನೆ ಸಂದರ್ಭದಲ್ಲಿ ಕಾಣೆಯಾಗಿದ್ದ ತಂದೆ ರಂಗ ಲಾಲ್ (54)ನನ್ನು ಕೆಲವು ದಿನಗಳ ಬಳಿಕ ವಶಕ್ಕೆ ಪಡೆದಿದ್ದರು. ವಿಚಾರಣೆ ಸಂದರ್ಭದಲ್ಲಿ ರಂಗಲಾಲ್ ತನ್ನ ಕೃತ್ಯದ ಬಗ್ಗೆ ಯಾವುದೇ ಪಶ್ಚಾತ್ತಾಪವೂ ಇಲ್ಲದೆ ಕೊಲೆಯನ್ನು ಒಪ್ಪಿಕೊಂಡಿದ್ದಾನೆ. ತಾನು ಮಾಡಿದ್ದೇ ಸರಿ ಎನ್ನುವಂತೆ ಪೊಲೀಸರಲ್ಲಿ ಹೇಳಿದ್ದಾನೆ.
ಅಂದು ರಾತ್ರಿ ಮಗನ ಜೊತೆಗೆ ತೀವ್ರ ಜಗಳ ಆಗಿತ್ತು. ಮಾತಿಗೆ ಮಾತು ಬೆಳೆದು ಮಗನೇ ತಂದೆಯ ಮೇಲೆ ಕೈಮಾಡಿದ್ದ. ಇದರಿಂದ ಸಿಟ್ಟುಗೊಂಡು ತಾನು ಸುಪಾರಿ ಕೊಟ್ಟಿದ್ದವರಿಗೆ ಹೇಳಿ ಮಗ ಗೌರವ್ ನನ್ನು ಕೊಲೆ ಮಾಡಿಸಿದ್ದಾನೆ. ರಂಗಲಾಲ್ ಜೊತೆಗೆ ಆತನ ಪತ್ನಿಗೆ ಸಂಬಂಧ ಸರಿ ಇರಲಿಲ್ಲ. ಹಾಗಾಗಿ ಆತನಿಂದ ದೂರವಾಗಿದ್ದಲ್ಲದೆ, ಮಗನ ಜೊತೆಗೆ ವಾಸವಿದ್ದಳು. ಮಗ ಜಿಮ್ ಟ್ರೈನರ್ ಆಗಿದ್ದರಿಂದ ಆತನ ಜೊತೆಯಲ್ಲೇ ಇದ್ದಳು. ಇದರಿಂದ ಪತಿ- ಪತ್ನಿಯ ನಡುವೆ ಗಲಾಟೆ ಆಗಿತ್ತು.
ಪತ್ನಿಗೆ ಬುದ್ಧಿ ಕಲಿಸಬೇಕು, ಆಕೆಗೆ ಹಣದ ಬೆಲೆ ತಿಳಿಯುವಂತೆ ಮಾಡಬೇಕು ಎಂಬ ಉದ್ದೇಶದಿಂದ ರಂಗಲಾಲ್ ಸಂಚು ಹೂಡಿದ್ದ. ಮೂವರನ್ನು 75 ಸಾವಿರ ರೂ. ಕೊಟ್ಟು ನೇಮಿಸಿದ್ದು, ಮೂರ್ನಾಲ್ಕು ತಿಂಗಳಿನಿಂದ ಮಗನ ಕೊಲೆಗೆ ಸ್ಕೆಚ್ ಹಾಕಿದ್ದ. ಕೊನೆಗೆ, ತನ್ನ ಮೇಲೆ ಮಗನೇ ಕೈಮಾಡಿದ ಕೋಪದಲ್ಲಿ ಆವತ್ತೇ ಕೊಲೆ ಮಾಡುವಂತೆ ತನ್ನ ಸಹಚರರಿಗೆ ಸೂಚನೆ ನೀಡಿದ್ದ. ನಡುರಾತ್ರಿಯಲ್ಲಿ ಕೊಲೆಗೈದು ಬಳಿಕ ಮಗನ ಮನೆಯಲ್ಲಿ ಮದುವೆ ಉದ್ದೇಶಕ್ಕಾಗಿ ರೆಡಿ ಮಾಡಿಕೊಂಡಿದ್ದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 15 ಲಕ್ಷ ನಗದನ್ನು ಕದ್ದೊಯ್ದಿದ್ದರು. ತಿಂಗಳ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಲ್ಲದೆ, ಆಭರಣ ವಶಕ್ಕೆ ಪಡೆದಿದ್ದಾರೆ.
The man who killed his 29-year-old son, a gym trainer, in Delhi committed the crime to "teach his estranged wife a lesson", police said on Friday. He had been planning the murder for three to four months, the investigation revealed.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm