ಬ್ರೇಕಿಂಗ್ ನ್ಯೂಸ್
14-03-24 04:04 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್ನಲ್ಲಿ ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು, ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗುಂಡಿನ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಅಂದಾ ರಾಮ್ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ಇಂದು ಇಬ್ಬರು ದರೋಡೆಕೋರರು ನುಗ್ಗಿದ್ದರು. ಬೈಕ್ನಲ್ಲಿ ಬಂದಿದ್ದ ನಾಲ್ವರು ಬೈಕ್ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದಾಗ ಪಿಸ್ತೂಲು ತೋರಿಸಿ ಹದರಿಸಿದ್ದಾರೆ. ಆಗಲೂ ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.
ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸುತ್ತಲಿದ್ದ ಜನರು ಓಡಿಬಂದಿದ್ದಾರೆ. ಆಗ ಈ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜುವೆಲ್ಲರಿಯ ಸಿಸಿಟಿವಿ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.
At least two people were injured after two bike-borne miscreants opened fire in Bengaluru's Kodigehalli area on Thursday. The incident took place earlier today at 11 am, when two bike-borne miscreants tried to rob a jewellery store, Laxmi jewellers, in Devinagar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm