ಬ್ರೇಕಿಂಗ್ ನ್ಯೂಸ್
14-03-24 04:04 pm Bangalore Correspondent ಕ್ರೈಂ
ಬೆಂಗಳೂರು, ಮಾ.14: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು ಹಾಡಹಗಲೇ ದುಷ್ಕರ್ಮಿಗಳು ಚಿನ್ನಾಭರಣ ಅಂಗಡಿ ಮೇಲೆ ದಾಳಿ ಮಾಡಿದ್ದಾರೆ.
ಬೆಂಗಳೂರಿನ ಕೊಡಿಗೆಹಳ್ಳಿ ಬಳಿಯ ದೇವಿ ನಗರದಲ್ಲಿರುವ ಲಕ್ಷ್ಮೀ ಜುವೆಲ್ಲರ್ಸ್ನಲ್ಲಿ ಗುರುವಾರ ಹಾಡಹಗಲೇ ಈ ಘಟನೆ ನಡೆದಿದ್ದು, ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗುಂಡಿನ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ಅಂದಾ ರಾಮ್ ಹಾಗು ಆಪುರಾಮ್ ಎಂಬವರಿಗೆ ಸೇರಿದ ಲಕ್ಷ್ಮೀ ಜುವೆಲ್ಲರಿಗೆ ಇಂದು ಇಬ್ಬರು ದರೋಡೆಕೋರರು ನುಗ್ಗಿದ್ದರು. ಬೈಕ್ನಲ್ಲಿ ಬಂದಿದ್ದ ನಾಲ್ವರು ಬೈಕ್ ನಿಲ್ಲಿಸಿ ನೇರವಾಗಿ ಅಂಗಡಿಗೆ ನುಗ್ಗಿದ್ದಾರೆ. ಚಿನ್ನದ ಅಂಗಡಿ ಮಾಲೀಕರ ಬಳಿ ತಮಗೆ ಹಣ ನೀಡುವಂತೆ ಕೇಳಿದ್ದಾರೆ. ಈ ವೇಳೆ ಹಣ ನೀಡಲು ನಿರಾಕರಿಸಿದಾಗ ಪಿಸ್ತೂಲು ತೋರಿಸಿ ಹದರಿಸಿದ್ದಾರೆ. ಆಗಲೂ ಮಾಲೀಕರು ಹಣ ಕೊಡಲು ಒಪ್ಪದೆ ಇದ್ದಾಗ ಹಲ್ಲೆ ನಡೆಸಿದ್ದಲ್ಲದೆ ಗುಂಡು ಹಾರಿಸಿದ್ದಾರೆ.
ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸುತ್ತಲಿದ್ದ ಜನರು ಓಡಿಬಂದಿದ್ದಾರೆ. ಆಗ ಈ ದರೋಡೆಕೋರರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿ ನಡೆಸಿ ಪರಾರಿಯಾಗುವ ಭರದಲ್ಲಿ ಪಿಸ್ತೂಲನ್ನು ಅಲ್ಲೇ ಬಿಟ್ಟು ಓಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಕೊಡಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜುವೆಲ್ಲರಿಯ ಸಿಸಿಟಿವಿ ಮತ್ತು ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಪರಿಶೀಲಿಸಲಾಗುತ್ತಿದೆ.
At least two people were injured after two bike-borne miscreants opened fire in Bengaluru's Kodigehalli area on Thursday. The incident took place earlier today at 11 am, when two bike-borne miscreants tried to rob a jewellery store, Laxmi jewellers, in Devinagar.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm