ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm