ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm