ಬ್ರೇಕಿಂಗ್ ನ್ಯೂಸ್
20-03-24 06:31 pm Mangalore Correspondent ಕ್ರೈಂ
ಉಳ್ಳಾಲ, ಮಾ.20: ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಪಡಿಸಿಕೊಂಡಿದ್ದಾರೆ.
ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಸಮುದ್ರ ತೀರದಿಂದ ದಿನನಿತ್ಯವೂ ಅಕ್ರಮವಾಗಿ ಮರಳು ತೆಗೆದು ನಾಡ ದೋಣಿಗಳ ಮೂಲಕ ಹೊಳೆಯಲ್ಲಿ ಸಾಗಾಟ ನಡೆಸಿ ನಾಗತೋಟ ನಿವಾಸಿ ಮಹಮ್ಮದ್ ಆಲಿ ಎಂಬವರ ಖಾಸಗಿ ಜಮೀನಿನಲ್ಲಿ ದಾಸ್ತಾನು ಇರಿಸಲಾಗುತ್ತಿತ್ತು. ದಾಸ್ತಾನು ಇರಿಸಿದ್ದ ಮರಳನ್ನು ಮಧ್ಯರಾತ್ರಿ ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿತ್ತು. ಬಟ್ಟಪ್ಪಾಡಿಯಲ್ಲಿ ನಡೆಯುತ್ತಿದ್ದ ಮರಳು ಮಾಫಿಯಾ ಬಗ್ಗೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಸುಖೇಶ್ ಉಚ್ಚಿಲ್ ಮತ್ತು ರಂಜಿತ್ ಬಟ್ಟಪ್ಪಾಡಿ ಅವರು ಸ್ಥಳೀಯ ಪೊಲೀಸರಿಗೆ ಪದೇ ಪದೇ ದೂರು ನೀಡಿದ್ದರೂ ಅಕ್ರಮ ಮರಳುಗಾರಿಕೆಗೆ ಕಡಿವಾಣ ಬಿದ್ದಿರಲಿಲ್ಲ.



ಎಗ್ಗಿಲ್ಲದೆ ಮುಂದುವರೆದಿದ್ದ ಅಕ್ರಮ ಮರಳುಗಾರಿಕೆಯ ಬಗ್ಗೆ ಸುಖೇಶ್ ಮತ್ತು ರಂಜಿತ್ ಅವರು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೇ ಮಂಗಳವಾರ ಕರೆ ಮಾಡಿ ತಿಳಿಸಿದ್ದರು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಸಿಬಿ ಪೊಲೀಸರನ್ನೊಳಗೊಂಡ ತಂಡವು ಬುಧವಾರ ಬೆಳ್ಳಂಬೆಳಗ್ಗೆ ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿದ್ದು ನಂತರ ಉಳ್ಳಾಲ ಪೊಲೀಸರಿಗೂ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳಾದ ಕುಂಜತ್ತೂರಿನ ಜಯರಾಮ್ ಶೆಟ್ಟಿ, ಇಬ್ರಾಹಿಂ ಕೋಟೆಪುರ, ವಿನೋದ್ ಉಚ್ಚಿಲ್ ಯಾನೆ ಹನಿ ಹಿಂದುಸ್ಥಾನಿ, ಚಂದ್ರ ಸೋಮೇಶ್ವರ ಮತ್ತು ಸುನಿಲ್ ತಲೆಮರೆಸಿಕೊಂಡಿದ್ದಾರೆ. ವಶ ಪಡಿಸಿಕೊಳ್ಳಲಾದ ಅಪಾರ ಪ್ರಮಾಣದ ಮರಳು ಮತ್ತು ನಾಡ ದೋಣಿಗಳನ್ನು ಪೊಲೀಸರು ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿರಿಗಳಿಗೆ ಹಸ್ತಾಂತರಿಸಿದ್ದಾರೆ.
ಅಕ್ರಮ ಮರಳನ್ನು ದಾಸ್ತಾನು ಇರಿಸಿ ಮರಳು ಮಾಫಿಯಾಗಳನ್ನು ಬೆಂಬಲಿಸುತ್ತಿದ್ದ ಮಹಮ್ಮದ್ ಆಲಿ ಅವರ ಜಮೀನನ್ನು ಮುಟ್ಟುಗೋಲು ಹಾಕುವಂತೆ ಸುಖೇಶ್ ಉಚ್ಚಿಲ್ ಅವರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
Mangalore Uchila illegal sand mining centre raid by CCB Police, four boats, sand seized.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm