ಬ್ರೇಕಿಂಗ್ ನ್ಯೂಸ್
21-03-24 07:32 pm HK News Desk ಕ್ರೈಂ
ಮಂಡ್ಯ, ಮಾ 21: ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಮಹಿಳೆ ಮತ್ತು ಎರಡೂವರೆ ವರ್ಷದ ಮಗುವೊಂದನ್ನು ದುಷ್ಕರ್ಮಿಗಳು ತುಂಡರಿಸಿ ಚೀಲದಲ್ಲಿ ಕಟ್ಟಿ ಕೆರೆಗೆ ಬಿಸಾಡಿರುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ಜಯಮ್ಮ (46), ಅವರ ಎರಡೂವರೆ ವರ್ಷದ ಮೊಮ್ಮಗಳು ರಿಷಿಕಾ ಕೊಲೆಯಾದವರು. ಜಯಮ್ಮ ಮಾ.12ರಂದು ಆದಿಚುಂಚನಗಿರಿಯ ವ್ಯಕ್ತಿಯೊಬ್ಬರು ತನಗೆ ಹಣ ನೀಡಬೇಕಾಗಿದ್ದು, ಅವರಿಂದ ಹಣ ಪಡೆದು ಬರುವುದಾಗಿ ತಿಳಿಸಿ ಮನೆಯಿಂದ ಮೊಮ್ಮಗಳ ಜತೆ ಬಂದಿದ್ದರು. ನಂತರ ಮಾ.18ರ ವರೆಗೂ ಮನೆಗೆ ಹಿಂದಿರುಗಿರಲಿಲ್ಲ. ಜಯಮ್ಮ ಅವರ ಮೊಬೈಲ್ ಫೋನ್ ಸ್ವೀಚ್ ಆಫ್ ಆಗಿತ್ತು. ಹೀಗಾಗಿ, ಜಯಮ್ಮ ಅವರ ಪುತ್ರ ಪ್ರವೀಣ್ ಅವರು ತಾಯಿ ಮತ್ತು ತನ್ನ ಪುತ್ರಿ ಕಾಣೆಯಾಗಿರುವುದಾಗಿ ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಾ.18ರಂದು ಮಧ್ಯಾಹ್ನ ಪ್ರವೀಣ್ ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ಆದಿಚುಂಚನಗಿರಿ ಕಲ್ಯಾಣಿ ಬಳಿ ಇರುವ ಕೆರೆಗೆ ಬಿಸಾಕಿರುವುದಾಗಿ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಪ್ರವೀಣ್ ಪೊಲೀಸರ ನೆರವಿನೊಂದಿಗೆ ಕೆರೆಗೆ ಬಂದು ಹುಡುಕಿದಾಗ ಚೀಲದಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದವು. ಮುಖದ ಗುರುತು ಸಿಗದಂತೆ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಲಾಗಿದೆ.
ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಎಎಸ್ಪಿ ತಿಮ್ಮಯ್ಯ, ಸಿಪಿಐ ಬಿ.ಆರ್. ಗೌಡ ಪರಿಶೀಲನೆ ನಡೆಸಿದರು. ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mandya body of two year old grand daughter and grand mother found in Lake. The body has been cut into pieces and thrown into the lake.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm