ಬ್ರೇಕಿಂಗ್ ನ್ಯೂಸ್
21-03-24 08:04 pm HK News Desk ಕ್ರೈಂ
ರಾಯಚೂರು, ಮಾ 21: ಮದುವೆ ಆಗಿದ್ದರೂ ಮತ್ತೊಬ್ಬನ ಮೋಹಿಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದಾಳೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯನೊರ್ವ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ರಾಜು ನಾಯ್ಕ್ (38) ಕೊಲೆಯಾದವರು. ಸ್ನೇಹಾ ಕೊಲೆ ಆರೋಪಿ ಆಗಿದ್ದಾಳೆ. ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ ರಾಜುಗೆ ತಿಳಿದುಹೋಯಿತು.

ಹೆಂಡತಿ ವಿಷಯ ಊರವರಿಗೆ ತಿಳಿದರೆ ಮಾನ ಮಾರ್ಯಾದೆ ಹೋಗುತ್ತೆ ಎಂದು ರಾಜು, ತನ್ನ ಪತ್ನಿ ಸ್ನೇಹಾಗೆ ಬುದ್ಧಿವಾದ ಹೇಳಿದ್ದ. ಆದರೂ ಸ್ನೇಹಾ ತನ್ನ ಅಕ್ರಮ ಸಂಬಂಧವನ್ನು ಮುಂದುವರಿಸಿದ್ದಳು. ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಕಳೆದ 2 ವರ್ಷಗಳಿಂದ ಜಗಳ ನಡೆಯುತ್ತಿತ್ತು.
ಇತ್ತೀಚೆಗೆ ದಂಪತಿ ಮಧ್ಯೆ ಇದೇ ವಿಷಯಕ್ಕೆ ಜಗಳ ನಡೆದಿತ್ತು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಸ್ನೇಹಾ ಆತನನ್ನು ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದಳು. ಪತಿಗಿದ್ದ ಕುಡಿತವನ್ನೇ ಬಂಡವಾಳ ಮಾಡಿಕೊಂಡ ಸ್ನೇಹ, ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಅದನ್ನೂ ಕುಡಿಯುತ್ತಿದ್ದಂತೆ ರಾಜು ನಿದ್ರೆಗೆ ಜಾರಿದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ನೇಹಾಳನ್ನು ವಶಕ್ಕೆ ಪಡೆದಿರುವ ಯಾಪಲದಿನ್ನಿ ಪೊಲೀಸರು, ಈ ಸಂಬಂಧ ಪ್ರಕರಣಕ್ಕೆ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
Raichur wife kills husband over her illicit affair. The deceased has been identified as Raju Naik. Since two years wife was in affair with a construction worker who had come from Maharashtra to Raichur.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm