ಬ್ರೇಕಿಂಗ್ ನ್ಯೂಸ್
21-03-24 08:04 pm HK News Desk ಕ್ರೈಂ
ರಾಯಚೂರು, ಮಾ 21: ಮದುವೆ ಆಗಿದ್ದರೂ ಮತ್ತೊಬ್ಬನ ಮೋಹಿಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದಾಳೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯನೊರ್ವ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ರಾಜು ನಾಯ್ಕ್ (38) ಕೊಲೆಯಾದವರು. ಸ್ನೇಹಾ ಕೊಲೆ ಆರೋಪಿ ಆಗಿದ್ದಾಳೆ. ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ ರಾಜುಗೆ ತಿಳಿದುಹೋಯಿತು.

ಹೆಂಡತಿ ವಿಷಯ ಊರವರಿಗೆ ತಿಳಿದರೆ ಮಾನ ಮಾರ್ಯಾದೆ ಹೋಗುತ್ತೆ ಎಂದು ರಾಜು, ತನ್ನ ಪತ್ನಿ ಸ್ನೇಹಾಗೆ ಬುದ್ಧಿವಾದ ಹೇಳಿದ್ದ. ಆದರೂ ಸ್ನೇಹಾ ತನ್ನ ಅಕ್ರಮ ಸಂಬಂಧವನ್ನು ಮುಂದುವರಿಸಿದ್ದಳು. ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಕಳೆದ 2 ವರ್ಷಗಳಿಂದ ಜಗಳ ನಡೆಯುತ್ತಿತ್ತು.
ಇತ್ತೀಚೆಗೆ ದಂಪತಿ ಮಧ್ಯೆ ಇದೇ ವಿಷಯಕ್ಕೆ ಜಗಳ ನಡೆದಿತ್ತು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಸ್ನೇಹಾ ಆತನನ್ನು ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದಳು. ಪತಿಗಿದ್ದ ಕುಡಿತವನ್ನೇ ಬಂಡವಾಳ ಮಾಡಿಕೊಂಡ ಸ್ನೇಹ, ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಅದನ್ನೂ ಕುಡಿಯುತ್ತಿದ್ದಂತೆ ರಾಜು ನಿದ್ರೆಗೆ ಜಾರಿದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ನೇಹಾಳನ್ನು ವಶಕ್ಕೆ ಪಡೆದಿರುವ ಯಾಪಲದಿನ್ನಿ ಪೊಲೀಸರು, ಈ ಸಂಬಂಧ ಪ್ರಕರಣಕ್ಕೆ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
Raichur wife kills husband over her illicit affair. The deceased has been identified as Raju Naik. Since two years wife was in affair with a construction worker who had come from Maharashtra to Raichur.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm