ಬ್ರೇಕಿಂಗ್ ನ್ಯೂಸ್
21-03-24 10:43 pm Mangalore Correspondent ಕ್ರೈಂ
ಮಂಗಳೂರು, ಮಾ.21: ನಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ನೀರುಮಾರ್ಗದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಯುವಕರ ಹೊಡೆದಾಟದ ದೃಶ್ಯ ಇದೆ. ಬಜ್ಜೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ವಿಷಯ ತಿಳಿದ ಲವರ್ ಯುವಕ ಬಜ್ಜೋಡಿಯಿಂದ ಐದಾರು ಮಂದಿ ಯುವಕರ ಜೊತೆಗೆ ಕಾರಿನಲ್ಲಿ ನೀರುಮಾರ್ಗಕ್ಕೆ ತೆರಳಿದ್ದು ಅಲ್ಲಿನ ಯುವಕನನ್ನು ಪ್ರಶ್ನೆ ಮಾಡಿದ್ದಾರೆ.


ತಡರಾತ್ರಿಯಲ್ಲಿ ಪಾಲ್ದಾನೆ ಎಂಬಲ್ಲಿ ಆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಹೊಡೆದಾಟದ ವಿಡಿಯೋವನ್ನು ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಒದೆ ತಿಂದ ಯುವಕನ ಮುಖ ರಕ್ತಸಿಕ್ತವಾಗಿತ್ತು.
ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಹುಡುಗರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಒಬ್ಬ ಯುವಕ ಕಳೆದ ವರ್ಷ ಡಿಗ್ರಿ ಪೂರೈಸಿದ್ದರೆ, ಹಲ್ಲೆ ನಡೆಸಿದ ಯುವಕ ಈ ಸಲ ಅಂತಿಮ ಪದವಿಯಲ್ಲಿದ್ದಾನೆ ಎಂಬ ಮಾಹಿತಿಯಿದೆ. ಎರಡೂ ಕಡೆಯ ಕುಟುಂಬಸ್ಥರು ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥ ಮಾಡಿದ್ದಾರೆ. ಹಲ್ಲೆ ನಡೆಸಿದ ಯುವಕ ಅಂತಿಮ ವರ್ಷದ ಡಿಗ್ರಿ ವಿದ್ಯಾರ್ಥಿಯಾಗಿದ್ದು, ಈ ಹಿಂದೆಯೂ ಕಾಲೇಜಿನಲ್ಲಿ ಗಲಾಟೆ ಮಾಡಿ ಕಿರಿಕ್ ಮಾಡಿದ್ದ. ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ.
Video of neermarga youth brutally assaulted by youth from Bajjodi in Mangalore goes viral over the issue of girl. Youth from neermarga paldane was dragged from his house and was brutally assaulted by a youth over matter of girl. The video of this has gone viral on social media. No case has been registered so far at Kankandy rural police station.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm