ಬ್ರೇಕಿಂಗ್ ನ್ಯೂಸ್
23-03-24 04:15 pm HK News Desk ಕ್ರೈಂ
ವಿಜಯಪುರ, ಮಾ 23: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು.
ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳುಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ರು ಆದ್ರೆ ಪೊಲೀಸರು ಈಗ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಹತ್ಯೆಯಾದ ಮಹಿಳೆಯ ಮಗನೂ ಸೇರಿದ್ದಾನೆ.
ಬಂಧಿತರನ್ನು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಹತ್ಯೆಯಾಗಿದ್ದ ಪಾರ್ವತಿ ತಳವಾರ ಮಗ ಲಕ್ಷ್ಮಣ ಭೀಮಪ್ಪ, ಆತನ ಸ್ನೇಹಿತರಾದ ಶಶಿಕುಮಾರ ರಂಗಪ್ಪ ಹಾಗೂ ಬಸವರಾಜ ಪರಪ್ಪ ಹಡಪದ ಎಂದು ಗುರುತಿಸಲಾಗಿದೆ.
ಲಕ್ಷ್ಮಣ ತಳವಾರ ಹತ್ಯೆಯಾಗಿರುವ ಪಾರ್ವತಿಯ ಮಗ. ಪಾರ್ವತಿ ಗಣಿ ಗ್ರಾಮದ ಸೋಮನಿಂಗಪ್ಪ ಕುಂಬಾರ ಎಂಬಾತನೊಂದಿಗೆ ಅನೈತಿಕ ಸಬಂಧ ಹೊಂದಿದ್ಲು. ತಾಯಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಮಗ ಲಕ್ಷ್ಮಣ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆಯ ಸಂಚು ರೂಪಿಸಿದ್ದ.
ಮಾ.18 ರಂದು ರಾತ್ರಿ ಆಕಳವಾಡಿ-ಮಾರಡಗಿ ಬಳಿ ಲಕ್ಷ್ಮಣನ ತಾಯಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಸೇರಿದಂತೆ ಜೋಡಿ ಕೊಲೆ ಮಾಡಿ, ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಎಸೈ ಶಿವರಾಜ ಧರಿಗೋಣ ನೇತೃತ್ವದ ತನಿಖಾ ತಂಡ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ್ದಾಗಿ ಎಸ್ಪಿ ಋಷಿಕೇಶ ಭಗವಾನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Murder, Illecit affair, son kills own mother and her lover in Vijayapura. The police have arrested three persons in connection to this case including her son.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm