ಬ್ರೇಕಿಂಗ್ ನ್ಯೂಸ್
23-03-24 04:15 pm HK News Desk ಕ್ರೈಂ
ವಿಜಯಪುರ, ಮಾ 23: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು.
ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳುಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ರು ಆದ್ರೆ ಪೊಲೀಸರು ಈಗ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಹತ್ಯೆಯಾದ ಮಹಿಳೆಯ ಮಗನೂ ಸೇರಿದ್ದಾನೆ.
ಬಂಧಿತರನ್ನು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಹತ್ಯೆಯಾಗಿದ್ದ ಪಾರ್ವತಿ ತಳವಾರ ಮಗ ಲಕ್ಷ್ಮಣ ಭೀಮಪ್ಪ, ಆತನ ಸ್ನೇಹಿತರಾದ ಶಶಿಕುಮಾರ ರಂಗಪ್ಪ ಹಾಗೂ ಬಸವರಾಜ ಪರಪ್ಪ ಹಡಪದ ಎಂದು ಗುರುತಿಸಲಾಗಿದೆ.
ಲಕ್ಷ್ಮಣ ತಳವಾರ ಹತ್ಯೆಯಾಗಿರುವ ಪಾರ್ವತಿಯ ಮಗ. ಪಾರ್ವತಿ ಗಣಿ ಗ್ರಾಮದ ಸೋಮನಿಂಗಪ್ಪ ಕುಂಬಾರ ಎಂಬಾತನೊಂದಿಗೆ ಅನೈತಿಕ ಸಬಂಧ ಹೊಂದಿದ್ಲು. ತಾಯಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಮಗ ಲಕ್ಷ್ಮಣ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆಯ ಸಂಚು ರೂಪಿಸಿದ್ದ.
ಮಾ.18 ರಂದು ರಾತ್ರಿ ಆಕಳವಾಡಿ-ಮಾರಡಗಿ ಬಳಿ ಲಕ್ಷ್ಮಣನ ತಾಯಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಸೇರಿದಂತೆ ಜೋಡಿ ಕೊಲೆ ಮಾಡಿ, ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಎಸೈ ಶಿವರಾಜ ಧರಿಗೋಣ ನೇತೃತ್ವದ ತನಿಖಾ ತಂಡ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ್ದಾಗಿ ಎಸ್ಪಿ ಋಷಿಕೇಶ ಭಗವಾನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Murder, Illecit affair, son kills own mother and her lover in Vijayapura. The police have arrested three persons in connection to this case including her son.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm