ಬ್ರೇಕಿಂಗ್ ನ್ಯೂಸ್
23-03-24 04:15 pm HK News Desk ಕ್ರೈಂ
ವಿಜಯಪುರ, ಮಾ 23: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು.
ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳುಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ರು ಆದ್ರೆ ಪೊಲೀಸರು ಈಗ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಹತ್ಯೆಯಾದ ಮಹಿಳೆಯ ಮಗನೂ ಸೇರಿದ್ದಾನೆ.
ಬಂಧಿತರನ್ನು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಹತ್ಯೆಯಾಗಿದ್ದ ಪಾರ್ವತಿ ತಳವಾರ ಮಗ ಲಕ್ಷ್ಮಣ ಭೀಮಪ್ಪ, ಆತನ ಸ್ನೇಹಿತರಾದ ಶಶಿಕುಮಾರ ರಂಗಪ್ಪ ಹಾಗೂ ಬಸವರಾಜ ಪರಪ್ಪ ಹಡಪದ ಎಂದು ಗುರುತಿಸಲಾಗಿದೆ.
ಲಕ್ಷ್ಮಣ ತಳವಾರ ಹತ್ಯೆಯಾಗಿರುವ ಪಾರ್ವತಿಯ ಮಗ. ಪಾರ್ವತಿ ಗಣಿ ಗ್ರಾಮದ ಸೋಮನಿಂಗಪ್ಪ ಕುಂಬಾರ ಎಂಬಾತನೊಂದಿಗೆ ಅನೈತಿಕ ಸಬಂಧ ಹೊಂದಿದ್ಲು. ತಾಯಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಮಗ ಲಕ್ಷ್ಮಣ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆಯ ಸಂಚು ರೂಪಿಸಿದ್ದ.
ಮಾ.18 ರಂದು ರಾತ್ರಿ ಆಕಳವಾಡಿ-ಮಾರಡಗಿ ಬಳಿ ಲಕ್ಷ್ಮಣನ ತಾಯಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಸೇರಿದಂತೆ ಜೋಡಿ ಕೊಲೆ ಮಾಡಿ, ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಎಸೈ ಶಿವರಾಜ ಧರಿಗೋಣ ನೇತೃತ್ವದ ತನಿಖಾ ತಂಡ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ್ದಾಗಿ ಎಸ್ಪಿ ಋಷಿಕೇಶ ಭಗವಾನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Murder, Illecit affair, son kills own mother and her lover in Vijayapura. The police have arrested three persons in connection to this case including her son.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm