ಬ್ರೇಕಿಂಗ್ ನ್ಯೂಸ್
27-03-24 11:12 pm Mangalore Correspondent ಕ್ರೈಂ
ಮಂಗಳೂರು, ಮಾ.27: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಿಸಿ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.325 ಕೆ ಜಿ ಗಾಂಜಾ ಸಹಿತ ಆರೋಪಿ ವಶಪಡಿಸಿಕೊಳ್ಳಲು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಂಗಳೂರು ನಗರಕ್ಕೆ ರೈಲಿನಲ್ಲಿ ತರುತ್ತಿದ್ದ. ಗಾಂಜಾವನ್ನು ಇಲ್ಲಿ ಸಣ್ಣ ಸಣ್ಣ ಪ್ಯಾಕೆಟ್ ಗಳನ್ನಾಗಿ ಮಾಡಿ ಮಂಗಳೂರಿನ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ. ಆರೋಪಿ ನೀರುಮಾರ್ಗ ನಿವಾಸಿ ನಿಶಾಂತ್ ಶೆಟ್ಟಿ(35) ಎಂಬಾತನಾಗಿದ್ದು ಆತನ ವಶದಲ್ಲಿದ್ದ ಅಶೋಕ್ ಲೈಲ್ಯಾಂಡ್ ದೋಸ್ತ್ ಗೂಡ್ಸ್ ಟೆಂಪೋ, ರೂ. 1,50,000/- ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾ, 2 ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ.


ಆರೋಪಿ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಪ್ರಕರಣ, ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹೀಗೆ ಒಟ್ಟು 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತದೆ.
The CCB police identified an accused carrying ganja from Vishakapatnam to Mangaluru via Bengaluru and selling it in Mangaluru. The police confiscated 6.325 kilos of ganja from the drug peddler.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
12-05-26 11:34 am
HK News Staffer
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
12-05-26 11:19 am
HK News Staffer
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm