ಬ್ರೇಕಿಂಗ್ ನ್ಯೂಸ್
06-04-24 06:55 pm Mangalore Correspondent ಕ್ರೈಂ
ಉಳ್ಳಾಲ, ಎ.6: ಗುಜರಿ ವ್ಯಾಪಾರಿಯೋರ್ವನನ್ನ ತನ್ನ ಬಾಡಿಗೆ ಮನೆಗೆ ಕರೆಸಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗಮಂದಿರ ಬಳಿ ಶನಿವಾರ ಸಂಜೆ ನಡೆದಿದೆ.
ಮಂಗಳೂರಿನ ಕಾವೂರು ಪಂಜಿಮೊಗರು ನಿವಾಸಿ ಹಮೀದ್ ಇರಿತಕ್ಕೊಳಗಾದ ಗುಜರಿ ವ್ಯಾಪಾರಿ. ಮೂಲತಃ ತಣ್ಣೀರುಬಾವಿ ನಿವಾಸಿ ಸದ್ರಿ ಉಳ್ಳಾಲದ ಮಹಾತ್ಮಗಾಂಧಿ ರಂಗಮಂದಿರದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿರುವ ಮೊಹಮ್ಮದ್ ಜಾವೇದ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ.
ಜಾವೇದ್ ಇಂದು ಸಂಜೆ ಹಮೀದ್ ನನ್ನು ಹಣಕಾಸಿನ ವಿಚಾರದಲ್ಲಿ ಮಾತುಕತೆ ನಡೆಸಲು ಉಳ್ಳಾಲದ ತನ್ನ ಬಾಡಿಗೆ ಮನೆಗೆ ಕರೆಸಿಕೊಂಡಿದ್ದ. ಈ ವೇಳೆ ಹಮೀದ್ ಎದೆಯ ಭಾಗಕ್ಕೆ ಜಾವೇದ್ ಚೂರಿಯಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ಹಮೀದ್ ಹೇಗೋ ತಪ್ಪಿಸಿಕೊಂಡು ಉಳ್ಳಾಲದ ಖಾಸಗಿ ಆಸ್ಪತ್ರೆಗೆ ಹೋಗಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ. ಹಮೀದ್ ಬಾಡಿಗೆ ಮನೆಯಿಂದ ತಪ್ಪಿಸಿ ಓಡಿದ ರಭಸಕ್ಕೆ ರಸ್ತೆಯಲ್ಲೆಲ್ಲಾ ರಕ್ತ ಹರಿದಿದೆ. ಗಂಭೀರ ಗಾಯಗೊಂಡಿದ್ದ ಹಮೀದ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಜಾವೇದ್ ಕೃತ್ಯವೆಸಗಿ ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಉಳ್ಳಾಲ ಪೊಲೀಸರಿಗೆ ಒಂದು ಮೊಬೈಲ್ ಲಭಿಸಿದೆ. ಜಾವೇದ್ ಒಬ್ಬನೇ ಕೃತ್ಯದಲ್ಲಿ ಭಾಗಿಯಾಗಿದ್ದನೋ ಅಥವಾ ಬೇರೆಯವರು ಪಾಲ್ಗೊಂಡಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣಕಾಸಿನ ಲೇವಾದೇವಿ ವಿಚಾರದಲ್ಲೇ ಇಬ್ಬರ ನಡುವೆ ವೈಷಮ್ಯ ಬೆಳೆದಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪರಾರಿಯಾಗಿರುವ ಜಾವೇದ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಹಮೀದ್ ಮನೆಯಲ್ಲಿ ಜೋಡಿ ಕೊಲೆ ನಡೆದಿತ್ತು!
ಪಂಜಿಮೊಗರಿನಲ್ಲಿ 2011ರ ಜೂನ್ 28ರಂದು ಹಮೀದ್ ಪತ್ನಿ ರಝಿಯಾ(35) ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ(8)ರನ್ನು ಚೂರಿಯಿಂದ ಇರಿದು ಹತ್ಯೆ ಮಾಡಲಾಗಿತ್ತು. ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಈ ಡಬಲ್ ಮರ್ಡರ್, ಹತ್ಯೆ ಆರೋಪಿಗಳು 13 ವರ್ಷಗಳಾದರೂ ಪತ್ತೆಯಾಗಿಲ್ಲ. ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆ ನಡೆದರೂ ಹಂತಕರು ಸಿಕ್ಕಿರಲಿಲ್ಲ.
Murder attempt at Ullal in Mangalore, miscreants flee. Scrap dealer was attacked. He was called over some financial settlement matter to ullal. Hamid is a resident of tannirbavi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm