ಬ್ರೇಕಿಂಗ್ ನ್ಯೂಸ್
10-04-24 12:16 pm Bangalore Correspondent ಕ್ರೈಂ
ಬೆಂಗಳೂರು, ಏ 10: ತಾಯಿಯಿಂದಲೇ ಇಬ್ಬರು ಮಕ್ಕಳು ಹತ್ಯೆಗೀಡಾದ ದಾರುಣ ಘಟನೆ ಮಂಗಳವಾರ ತಡರಾತ್ರಿ ಜಾಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಲಕ್ಷ್ಮೀ (9) ಹಾಗೂ ಗೌತಮ್ (7) ಕೊಲೆಯಾದ ಮಕ್ಕಳು ಎಂದು ತಿಳಿದು ಬಂದಿದೆ. ಕೊಲೆ ಬಳಿಕ ಮಹಿಳೆಯೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದ್ದಾಳೆ.
ಗಂಗಾದೇವಿ ಕೊಲೆ ಮಾಡಿರುವ ಆರೋಪಿ ತಾಯಿಯಾಗಿದ್ದು, ದಿಂಬಿನಿಂದ ಉಸಿರುಗಟ್ಟಿಸಿ ಕೊಂದಿದ್ದಾಳೆ ಎನ್ನಲಾಗಿದೆ. ದಿಂಬಿನಿಂದ ಉಸಿರುಗಟ್ಟಿಸಿ ಮಕ್ಕಳನ್ನು ಕೊಂದಿರುವ ಆರೋಪದ ಮೇಲೆ ತಾಯಿ ಗಂಗಾದೇವಿಯನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಲತಃ ಆಂಧ್ರಪ್ರದೇಶದವರಾದ ಗಂಗಾದೇವಿ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಆರೋಪಿ ಗಂಗಾದೇವಿ ಖಾಸಗಿ ಕಂಪನಿಯೊಂದರ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರೆ, ಆಕೆಯ ಪತಿ ಬಿಬಿಎಂಪಿಯ ಗುತ್ತಿಗೆ ಆಧಾರದ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಮಾರ್ಚ್ ತಿಂಗಳಿನಲ್ಲಿ ಗಂಡನ ವಿರುದ್ಧ ಗಂಗಾದೇವಿಯೇ ನೀಡಿದ್ದ ದೂರಿನ ಅನ್ವಯ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಂಗಳವಾರ ಇಬ್ಬರು ಮಕ್ಕಳೊಂದಿಗೆ ಯುಗಾದಿ ಹಬ್ಬ ಆಚರಿಸಿದ್ದ ಗಂಗಾದೇವಿ, ತಡರಾತ್ರಿ ಮಕ್ಕಳಿಬ್ಬರನ್ನೂ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಬಳಿಕ ರಾತ್ರಿ 1 ಗಂಟೆ ಸುಮಾರಿಗೆ ತಾನೇ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ, ಗಲಾಟೆಯಾಗಿದೆ ಎಂದು ಪೊಲೀಸರ ನೆರವು ಕೇಳಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರ ಎದುರು ತಾನೇ ಮಕ್ಕಳನ್ನು ಕೊಲೆ ಮಾಡಿರುವುದಾಗಿ ಗಂಗಾದೇವಿ ಒಪ್ಪಿಕೊಂಡಿದ್ದಾರೆ ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.
ಕುಟುಂಬ ನಿರ್ವಹಣೆಗೆ ಕಷ್ಟ ಆಗುತ್ತಿದ್ದುದರಿಂದ ಮಾನಸಿಕ ಒತ್ತಡಕ್ಕೊಳಪಟ್ಟು ಆರೋಪಿಯೇ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸದ್ಯ ಆರೋಪಿಯನ್ನ ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಅಡಾವತ್ ಮಾಹಿತಿ ನೀಡಿದ್ದಾರೆ.
Mother kills two of her children using pillow in Bangalore and later calls police to her house and confesses the crime she has commit. Recently her husband was arrested on POSCO charges and she was mentally disturbed.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm