ಬ್ರೇಕಿಂಗ್ ನ್ಯೂಸ್
10-04-24 01:33 pm Mangalore Correspondent ಕ್ರೈಂ
ಮಂಗಳೂರು, ಎ.10: ಸರ್ಕಾರಿ ಅಧಿಕಾರಿಯೊಬ್ಬರನ್ನು ಖದೀಮರ ತಂಡವೊಂದು ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿ ವಂಚಿಸಲು ಯತ್ನಿಸಿದ ಘಟನೆ ನಡೆದಿದ್ದು ಕಂದಾಯ ಅಧಿಕಾರಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿಯಾಗಿರುವ ಪುರುಷೋತ್ತಮ ಅವರು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ನಿಮಿತ್ತ ಸಂಚಾರ ತಂಡದಲ್ಲಿ (ಫ್ಲೈಯಿಂಗ್ ಸ್ಕ್ವಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಎ. 5ರಂದು ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆಯ ವರೆಗೆ ಫ್ಲೈಯಿಂಗ್ ಸ್ಕ್ವಾಡ್ 1 ರಲ್ಲಿ ಅವರು ಕರ್ತವ್ಯ ನಿರ್ವಹಿಸಬೇಕಿತ್ತು. ಅಂದು ಮಧ್ಯಾಹ್ನದ ವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅದೇ ದಿನ ಮಧ್ಯಾಹ್ನ ವಾಟ್ಸ್ಆ್ಯಪ್ ಕರೆ ಮಾಡಿದ್ದ ವ್ಯಕ್ತಿಯೋರ್ವ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ. ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಫೋನ್ ಕೊಟ್ಟಿದ್ದು, ಆ ವ್ಯಕ್ತಿ ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಇಲ್ಲಿಗೆ ಸರಿ ಮಾಡೋದಾದರೆ ಮಾಡೋಣ ಎಂದು ಹೇಳಿ ಮೊದಲು ಮಾತನಾಡಿದ್ದ ವ್ಯಕ್ತಿಗೆ ಫೋನ್ ಕೊಟ್ಟಿದ್ದ. ಅಲ್ಲದೇ 80 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು ಎನ್ನಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ಕಂದಾಯ ಅಧಿಕಾರಿ, ‘ತನಗೆ 9 ತಿಂಗಳಿನಿಂದ ಸಂಬಳ ಆಗಿಲ್ಲ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕರೆ ಮಾಡಿದ ವ್ಯಕ್ತಿ 50 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಬೇಕು. ಇಲ್ಲದಿದ್ದರೆ ತೊಂದರೆ ಆಗುತ್ತದೆ ಎಂದು ಬೆದರಿಸಿದ್ದರು. ಈ ವೇಳೆ ಪುರುಷೋತ್ತಮ ಅವರು ಕರೆ ಕಟ್ ಮಾಡಿದ್ದಾರೆ. ಬಳಿಕ ಕರೆ ಬಂದ ಮೊಬೈಲ್ ನಂಬರ್ ಟ್ರೂ ಕಾಲರ್ ಆ್ಯಪ್ನಲ್ಲಿ ಪರಿಶೀಲಿಸಿದಾಗ ‘ಡಿ. ಪ್ರಭಾಕರ, ಲೋಕಾಯುಕ್ತ ಪಿ.ಐ’ ಎಂದು ತೋರಿಸಿತ್ತು. ಕೂಡಲೇ ಲೋಕಾಯುಕ್ತ ಪೊಲೀಸರ ಮಂಗಳೂರು ಕಚೇರಿಯ ಅಧಿಕಾರಿಗಳಲ್ಲಿ ಈ ಬಗ್ಗೆ ವಿಚಾರಿಸಿದ್ದಾರೆ. ಅಂತಹ ಹೆಸರಿನ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ತಮ್ಮ ಕಚೇರಿಯಲ್ಲಿ ಇಲ್ಲ ಎಂದು ಲೋಕಾಯುಕ್ತ ಕಚೇರಿಯಿಂದ ತಿಳಿಸಿದ ಮೇರೆಗೆ, ಕಂದಾಯ ಅಧಿಕಾರಿ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Mangalore Someshwara Town Municipal officer gets fake Lokayukta call, Fraudsters demand money or else will file case. A case has been booked at Ullal police station.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm