ಬ್ರೇಕಿಂಗ್ ನ್ಯೂಸ್
10-04-24 01:33 pm Mangalore Correspondent ಕ್ರೈಂ
ಮಂಗಳೂರು, ಎ.10: ಸರ್ಕಾರಿ ಅಧಿಕಾರಿಯೊಬ್ಬರನ್ನು ಖದೀಮರ ತಂಡವೊಂದು ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿ ವಂಚಿಸಲು ಯತ್ನಿಸಿದ ಘಟನೆ ನಡೆದಿದ್ದು ಕಂದಾಯ ಅಧಿಕಾರಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿಯಾಗಿರುವ ಪುರುಷೋತ್ತಮ ಅವರು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ನಿಮಿತ್ತ ಸಂಚಾರ ತಂಡದಲ್ಲಿ (ಫ್ಲೈಯಿಂಗ್ ಸ್ಕ್ವಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಎ. 5ರಂದು ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆಯ ವರೆಗೆ ಫ್ಲೈಯಿಂಗ್ ಸ್ಕ್ವಾಡ್ 1 ರಲ್ಲಿ ಅವರು ಕರ್ತವ್ಯ ನಿರ್ವಹಿಸಬೇಕಿತ್ತು. ಅಂದು ಮಧ್ಯಾಹ್ನದ ವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅದೇ ದಿನ ಮಧ್ಯಾಹ್ನ ವಾಟ್ಸ್ಆ್ಯಪ್ ಕರೆ ಮಾಡಿದ್ದ ವ್ಯಕ್ತಿಯೋರ್ವ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ. ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಫೋನ್ ಕೊಟ್ಟಿದ್ದು, ಆ ವ್ಯಕ್ತಿ ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಇಲ್ಲಿಗೆ ಸರಿ ಮಾಡೋದಾದರೆ ಮಾಡೋಣ ಎಂದು ಹೇಳಿ ಮೊದಲು ಮಾತನಾಡಿದ್ದ ವ್ಯಕ್ತಿಗೆ ಫೋನ್ ಕೊಟ್ಟಿದ್ದ. ಅಲ್ಲದೇ 80 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು ಎನ್ನಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ಕಂದಾಯ ಅಧಿಕಾರಿ, ‘ತನಗೆ 9 ತಿಂಗಳಿನಿಂದ ಸಂಬಳ ಆಗಿಲ್ಲ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕರೆ ಮಾಡಿದ ವ್ಯಕ್ತಿ 50 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಬೇಕು. ಇಲ್ಲದಿದ್ದರೆ ತೊಂದರೆ ಆಗುತ್ತದೆ ಎಂದು ಬೆದರಿಸಿದ್ದರು. ಈ ವೇಳೆ ಪುರುಷೋತ್ತಮ ಅವರು ಕರೆ ಕಟ್ ಮಾಡಿದ್ದಾರೆ. ಬಳಿಕ ಕರೆ ಬಂದ ಮೊಬೈಲ್ ನಂಬರ್ ಟ್ರೂ ಕಾಲರ್ ಆ್ಯಪ್ನಲ್ಲಿ ಪರಿಶೀಲಿಸಿದಾಗ ‘ಡಿ. ಪ್ರಭಾಕರ, ಲೋಕಾಯುಕ್ತ ಪಿ.ಐ’ ಎಂದು ತೋರಿಸಿತ್ತು. ಕೂಡಲೇ ಲೋಕಾಯುಕ್ತ ಪೊಲೀಸರ ಮಂಗಳೂರು ಕಚೇರಿಯ ಅಧಿಕಾರಿಗಳಲ್ಲಿ ಈ ಬಗ್ಗೆ ವಿಚಾರಿಸಿದ್ದಾರೆ. ಅಂತಹ ಹೆಸರಿನ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ತಮ್ಮ ಕಚೇರಿಯಲ್ಲಿ ಇಲ್ಲ ಎಂದು ಲೋಕಾಯುಕ್ತ ಕಚೇರಿಯಿಂದ ತಿಳಿಸಿದ ಮೇರೆಗೆ, ಕಂದಾಯ ಅಧಿಕಾರಿ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Mangalore Someshwara Town Municipal officer gets fake Lokayukta call, Fraudsters demand money or else will file case. A case has been booked at Ullal police station.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am