ಬ್ರೇಕಿಂಗ್ ನ್ಯೂಸ್
10-04-24 01:33 pm Mangalore Correspondent ಕ್ರೈಂ
ಮಂಗಳೂರು, ಎ.10: ಸರ್ಕಾರಿ ಅಧಿಕಾರಿಯೊಬ್ಬರನ್ನು ಖದೀಮರ ತಂಡವೊಂದು ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿ ವಂಚಿಸಲು ಯತ್ನಿಸಿದ ಘಟನೆ ನಡೆದಿದ್ದು ಕಂದಾಯ ಅಧಿಕಾರಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸೋಮೇಶ್ವರ ಪುರಸಭೆಯ ಕಂದಾಯ ಅಧಿಕಾರಿಯಾಗಿರುವ ಪುರುಷೋತ್ತಮ ಅವರು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ನಿಮಿತ್ತ ಸಂಚಾರ ತಂಡದಲ್ಲಿ (ಫ್ಲೈಯಿಂಗ್ ಸ್ಕ್ವಾಡ್) ಕರ್ತವ್ಯ ನಿರ್ವಹಿಸುತ್ತಿದ್ದರು. ಎ. 5ರಂದು ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆಯ ವರೆಗೆ ಫ್ಲೈಯಿಂಗ್ ಸ್ಕ್ವಾಡ್ 1 ರಲ್ಲಿ ಅವರು ಕರ್ತವ್ಯ ನಿರ್ವಹಿಸಬೇಕಿತ್ತು. ಅಂದು ಮಧ್ಯಾಹ್ನದ ವರೆಗೆ ಎಂದಿನಂತೆ ಸೋಮೇಶ್ವರ ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅದೇ ದಿನ ಮಧ್ಯಾಹ್ನ ವಾಟ್ಸ್ಆ್ಯಪ್ ಕರೆ ಮಾಡಿದ್ದ ವ್ಯಕ್ತಿಯೋರ್ವ, ‘ಲೋಕಾಯುಕ್ತದಿಂದ ಮಾತನಾಡುತ್ತಿದ್ದೇವೆ. ನಿಮ್ಮ ವಿರುದ್ಧ ದೂರು ಬಂದಿದೆ. ಸಾಹೇಬರು ಮಾತನಾಡುತ್ತಾರೆ ಎಂದು ಬೇರೊಬ್ಬ ವ್ಯಕ್ತಿಗೆ ಫೋನ್ ಕೊಟ್ಟಿದ್ದು, ಆ ವ್ಯಕ್ತಿ ನಿಮ್ಮ ಕಚೇರಿಗೆ ಬರುವ ಮೊದಲು ಈ ವಿಚಾರವನ್ನು ಇಲ್ಲಿಗೆ ಸರಿ ಮಾಡೋದಾದರೆ ಮಾಡೋಣ ಎಂದು ಹೇಳಿ ಮೊದಲು ಮಾತನಾಡಿದ್ದ ವ್ಯಕ್ತಿಗೆ ಫೋನ್ ಕೊಟ್ಟಿದ್ದ. ಅಲ್ಲದೇ 80 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಲು ಹೇಳಿದ್ದರು ಎನ್ನಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ಕಂದಾಯ ಅಧಿಕಾರಿ, ‘ತನಗೆ 9 ತಿಂಗಳಿನಿಂದ ಸಂಬಳ ಆಗಿಲ್ಲ ಎಂದು ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕರೆ ಮಾಡಿದ ವ್ಯಕ್ತಿ 50 ಸಾವಿರ ರೂ. ಫೋನ್ ಪೇ ಮೂಲಕ ಕಳುಹಿಸಬೇಕು. ಇಲ್ಲದಿದ್ದರೆ ತೊಂದರೆ ಆಗುತ್ತದೆ ಎಂದು ಬೆದರಿಸಿದ್ದರು. ಈ ವೇಳೆ ಪುರುಷೋತ್ತಮ ಅವರು ಕರೆ ಕಟ್ ಮಾಡಿದ್ದಾರೆ. ಬಳಿಕ ಕರೆ ಬಂದ ಮೊಬೈಲ್ ನಂಬರ್ ಟ್ರೂ ಕಾಲರ್ ಆ್ಯಪ್ನಲ್ಲಿ ಪರಿಶೀಲಿಸಿದಾಗ ‘ಡಿ. ಪ್ರಭಾಕರ, ಲೋಕಾಯುಕ್ತ ಪಿ.ಐ’ ಎಂದು ತೋರಿಸಿತ್ತು. ಕೂಡಲೇ ಲೋಕಾಯುಕ್ತ ಪೊಲೀಸರ ಮಂಗಳೂರು ಕಚೇರಿಯ ಅಧಿಕಾರಿಗಳಲ್ಲಿ ಈ ಬಗ್ಗೆ ವಿಚಾರಿಸಿದ್ದಾರೆ. ಅಂತಹ ಹೆಸರಿನ ಯಾವುದೇ ಅಧಿಕಾರಿ ಅಥವಾ ಸಿಬ್ಬಂದಿ ತಮ್ಮ ಕಚೇರಿಯಲ್ಲಿ ಇಲ್ಲ ಎಂದು ಲೋಕಾಯುಕ್ತ ಕಚೇರಿಯಿಂದ ತಿಳಿಸಿದ ಮೇರೆಗೆ, ಕಂದಾಯ ಅಧಿಕಾರಿ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
Mangalore Someshwara Town Municipal officer gets fake Lokayukta call, Fraudsters demand money or else will file case. A case has been booked at Ullal police station.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 12:15 pm
HK News Staffer
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm