ಬ್ರೇಕಿಂಗ್ ನ್ಯೂಸ್
30-11-20 06:31 pm Mangalore Correspondent ಕ್ರೈಂ
ಮಂಗಳೂರು, ನ.30: ಮಹಿಳೆಯೊಬ್ಬರ ಮನೆಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪೊಲೀಸ್ ವಾರ್ತೆ ಪತ್ರಿಕೆ ಹೆಸರಲ್ಲಿ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಬಜ್ಪೆ ಠಾಣೆಯಲ್ಲಿ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಪೊಲೀಸ್ ವಾರ್ತೆ ಪತ್ರಿಕೆಯ ಸುಭಾಸ್ ಶೆಟ್ಟಿ, ಮನೋಜ್ ಉಳ್ಳಾಲ್ ಮತ್ತು ನಿತಿನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ನ.26ರಂದು ಈ ಮೂವರು ಮರವೂರಿನ ಮನೆಗೆ ಐ ಟ್ವೆಂಟಿ ಕಾರಿನಲ್ಲಿ ತೆರಳಿದ್ದು, ಅಲ್ಲಿ ದಿವ್ಯ ಎಂಬ ಹುಡುಗಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಆಬಳಿಕ ಮೊಬೈಲಿನಲ್ಲಿ ಫೋಟೊ ತೆಗೆದು, ನಾವು ಮೀಡಿಯಾದವರು. ನಿಮ್ಮಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಈ ಬಗ್ಗೆ ನಾವು ಪೊಲೀಸ್ ವಾರ್ತೆ ಪತ್ರಿಕೆಯಲ್ಲಿ ಮತ್ತು ಸ್ಟೇಟ್ ಚಾನಲಿನಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ. ಆಬಳಿಕ ಒಂದು ಲಕ್ಷ ರೂ. ಕೊಟ್ಟರೆ ಸುದ್ದಿ ಹಾಕುವುದಿಲ್ಲ ಎಂದು ಹೇಳಿ ಹಣದ ಬೇಡಿಕೆ ಮುಂದಿಟ್ಟಿದ್ದಾರೆ.



ಕೊನೆಗೆ, 15 ಸಾವಿರ ರೂ.ವನ್ನು ಮನೆಯವರು ಕೊಟ್ಟಿದ್ದಾರೆ. ಉಳಿದ ಹಣವನ್ನು ಆಮೇಲೆ ಕೊಡುವುದಾಗಿ ಹೇಳಿದ್ದಾರೆ. ಆದರೆ, ಮರುದಿನ ಮನೋಜ್ ಮತ್ತು ನಿತಿನ್ ಮನೆಯವರಿಗೆ ಫೋನ್ ಮಾಡಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಮಹಿಳೆ, ಫೋನ್ ಮಾಡಿ ಹಣ ಕೇಳುತ್ತಿರುವ ಬಗ್ಗೆ ಕರೆಯನ್ನು ರೆಕಾರ್ಡ್ ಮಾಡಿದ್ದರು. ಹಣ ಕೊಡದಿದ್ದರೆ ಚಾನೆಲ್ನಲ್ಲಿ ಸುದ್ದಿ ಹಾಕಿಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರಿಂದ ಮಹಿಳೆ ಹೆದರಿದ್ದರು.
ಆಬಳಿಕ ಮಹಿಳೆ ಮತ್ತು ಪತಿ ಚಂದ್ರಶೇಖರ್ ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಮೂವರ ಹೆಸರು ನಮೂದಿಸಿದ್ದು, ಬ್ಲಾಕ್ ಮೇಲ್ ವಿಚಾರದಲ್ಲಿ ವಿವರವಾಗಿ ದೂರು ತಿಳಿಸಿದ್ದಾರೆ. ಸುಭಾಸ್ ಶೆಟ್ಟಿ ಮತ್ತು ಆತನ ಮೂವರು ಸಹಚರರು ಈಗ ತಲೆಮರೆಸಿಕೊಂಡಿದ್ದಾರೆ. ಬಜ್ಪೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
The Bajpe Police have registered Blackmail and Extortion case against Journalist Police Varthe Subhas Shetty, Manoj Ullal and Nitin.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am