ಬ್ರೇಕಿಂಗ್ ನ್ಯೂಸ್
30-11-20 06:31 pm Mangalore Correspondent ಕ್ರೈಂ
ಮಂಗಳೂರು, ನ.30: ಮಹಿಳೆಯೊಬ್ಬರ ಮನೆಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪೊಲೀಸ್ ವಾರ್ತೆ ಪತ್ರಿಕೆ ಹೆಸರಲ್ಲಿ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಬಜ್ಪೆ ಠಾಣೆಯಲ್ಲಿ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಪೊಲೀಸ್ ವಾರ್ತೆ ಪತ್ರಿಕೆಯ ಸುಭಾಸ್ ಶೆಟ್ಟಿ, ಮನೋಜ್ ಉಳ್ಳಾಲ್ ಮತ್ತು ನಿತಿನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ನ.26ರಂದು ಈ ಮೂವರು ಮರವೂರಿನ ಮನೆಗೆ ಐ ಟ್ವೆಂಟಿ ಕಾರಿನಲ್ಲಿ ತೆರಳಿದ್ದು, ಅಲ್ಲಿ ದಿವ್ಯ ಎಂಬ ಹುಡುಗಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಆಬಳಿಕ ಮೊಬೈಲಿನಲ್ಲಿ ಫೋಟೊ ತೆಗೆದು, ನಾವು ಮೀಡಿಯಾದವರು. ನಿಮ್ಮಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಈ ಬಗ್ಗೆ ನಾವು ಪೊಲೀಸ್ ವಾರ್ತೆ ಪತ್ರಿಕೆಯಲ್ಲಿ ಮತ್ತು ಸ್ಟೇಟ್ ಚಾನಲಿನಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ. ಆಬಳಿಕ ಒಂದು ಲಕ್ಷ ರೂ. ಕೊಟ್ಟರೆ ಸುದ್ದಿ ಹಾಕುವುದಿಲ್ಲ ಎಂದು ಹೇಳಿ ಹಣದ ಬೇಡಿಕೆ ಮುಂದಿಟ್ಟಿದ್ದಾರೆ.



ಕೊನೆಗೆ, 15 ಸಾವಿರ ರೂ.ವನ್ನು ಮನೆಯವರು ಕೊಟ್ಟಿದ್ದಾರೆ. ಉಳಿದ ಹಣವನ್ನು ಆಮೇಲೆ ಕೊಡುವುದಾಗಿ ಹೇಳಿದ್ದಾರೆ. ಆದರೆ, ಮರುದಿನ ಮನೋಜ್ ಮತ್ತು ನಿತಿನ್ ಮನೆಯವರಿಗೆ ಫೋನ್ ಮಾಡಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಮಹಿಳೆ, ಫೋನ್ ಮಾಡಿ ಹಣ ಕೇಳುತ್ತಿರುವ ಬಗ್ಗೆ ಕರೆಯನ್ನು ರೆಕಾರ್ಡ್ ಮಾಡಿದ್ದರು. ಹಣ ಕೊಡದಿದ್ದರೆ ಚಾನೆಲ್ನಲ್ಲಿ ಸುದ್ದಿ ಹಾಕಿಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರಿಂದ ಮಹಿಳೆ ಹೆದರಿದ್ದರು.
ಆಬಳಿಕ ಮಹಿಳೆ ಮತ್ತು ಪತಿ ಚಂದ್ರಶೇಖರ್ ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಮೂವರ ಹೆಸರು ನಮೂದಿಸಿದ್ದು, ಬ್ಲಾಕ್ ಮೇಲ್ ವಿಚಾರದಲ್ಲಿ ವಿವರವಾಗಿ ದೂರು ತಿಳಿಸಿದ್ದಾರೆ. ಸುಭಾಸ್ ಶೆಟ್ಟಿ ಮತ್ತು ಆತನ ಮೂವರು ಸಹಚರರು ಈಗ ತಲೆಮರೆಸಿಕೊಂಡಿದ್ದಾರೆ. ಬಜ್ಪೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
The Bajpe Police have registered Blackmail and Extortion case against Journalist Police Varthe Subhas Shetty, Manoj Ullal and Nitin.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm