ಬ್ರೇಕಿಂಗ್ ನ್ಯೂಸ್
12-04-24 03:21 pm HK NEWS ಕ್ರೈಂ
ಬೆಂಗಳೂರು, ಎ.12: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿ ಪ್ರಮುಖ ಇಬ್ಬರು ಆರೋಪಿಗಳನ್ನು ಕಡೆಗೂ ಎನ್ಐಎ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಾಂಬ್ ಇಟ್ಟು ಪರಾರಿಯಾಗಿದ್ದ ಶಿವಮೊಗ್ಗ ಮೂಲದ ಮುಸಾವಿರ್ ಹುಸೇನ್ ಹಾಗೂ ಕೃತ್ಯಕ್ಕೆ ಸಂಚು ನಡೆಸಿದ್ದ ಅಬ್ದುಲ್ ಮತೀನ್ ತಾಹಾನನ್ನು ಎನ್ಐಎ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಬಂಧಿಸಿದೆ.
ಈ ಬಗ್ಗೆ ಎನ್ಐಎ ಹೇಳಿಕೆ ಬಿಡುಗಡೆ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಅಡಗಿಕೊಂಡಿದ್ದರು. ಎ.12ರಂದು ಬೆಳಗ್ಗೆ ಕೊಲ್ಕತ್ತಾದಲ್ಲಿ ನಿಗೂಢ ಜಾಗದಲ್ಲಿ ಅಡಗಿದ್ದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜಿಬ್ ಅವರನ್ನು ಬಂಧಿಸಲಾಗಿದೆ. ಮುಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟು ಸ್ಪೋಟಿಸಿದ್ದ, ಅಬ್ದುಲ್ ಮತೀನ್ ತಾಹಾ ಬಾಂಬ್ ಬಾಂಬ್ ಇಡುವುದಕ್ಕೆ ಪ್ಲಾನ್ ಮಾಡಿದ್ದ. ಪ್ರಕರಣದಲ್ಲಿ ಅಬ್ದುಲ್ ಮತೀನ್ ಮಾಸ್ಟರ್ ಮೈಂಡ್ ಆಗಿ ಕೆಲಸ ಮಾಡಿದ್ದ ಎಂದು ಹೇಳಿದೆ.
ಕೋಲ್ಕತ್ತಾದಲ್ಲಿ ಉಗ್ರರು ನಕಲಿ ದಾಖಲೆ ನೀಡಿ ಹೆಸರು ಬದಲಿಸಿಕೊಂಡು ವಾಸ್ತವ್ಯ ಹೂಡಿದ್ದರು. ಕಾರ್ಯಾಚರಣೆಗೆ ಎನ್ ಐಎ ಜೊತೆ ಐಬಿ, ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ, ಕೇರಳ ಪೊಲೀಸರು ಸಹಕಾರ ನೀಡಿದ್ದರು. ಎಲ್ಲಾ ಏಜೆನ್ಸಿಗಳ ಸಹಾಯದಿಂದ ಉಗ್ರರ ಬಂಧನವಾಗಿದೆ ಎಂದು ಎನ್ ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಲ್ಕಾತ್ತಾ ಹೊರವಲಯದ ಪೂರ್ವ ಮಿಡ್ನಾಪುರ ಜಿಲ್ಲೆಯ ದಿಘಾ ಎಂಬಲ್ಲಿ ಇವರು ತಮ್ಮ ಹೆಸರು ಬದಲಿಸಿಕೊಂಡು ವಾಸವಿದ್ದರು. ಮಧ್ಯರಾತ್ರಿ 2.30ರ ಸುಮಾರಿಗೆ ಉಗ್ರರು ಅಡಗಿದ್ದ ಮನೆಯ ಮೇಲೆ ದಾಳಿ ನಡೆಸಿ, ನಿದ್ದೆಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಎನ್ ಐಎ ತಂಡ ಬಳಿಕ ಬೆಂಗಳೂರಿಗೆ ಕರೆತರಲಿದೆ.
The National Investigation Agency said on Friday that it has arrested two accused, including the "mastermind" behind the Bengaluru's Rameswaram Cafe blast near Kolkata. According to media reports, the NIA apprehended Mussavir Hussain Shazib, the key accused who allegedly placed the IED at the Bengaluru cafe, and Abdul Matheen Taha, the alleged mastermind behind the planning and execution of the blast. The two accused are residents of the Thirthahalli area in Karnataka's Shivamogga district.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm