ಬ್ರೇಕಿಂಗ್ ನ್ಯೂಸ್
19-04-24 09:27 am HK NEWS ಕ್ರೈಂ
ಗದಗ, ಏ 19: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ ಸೇರಿದಂತೆ ವಿವಿಧ ಆಯಾಮಗಳನ್ನು ತನಿಖೆ ನಡೆಸಲಾಗುತ್ತಿದೆ.
ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.
ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.
ಶ್ವಾನದಳ, ಫಾರೆನ್ಸಿಕ್ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
4 of Family Murdered in Gadag District, including son of city council president. The murder of three took place in the first floor of the building and have fleed from the spot throwing away weapons near by the building. Police are now investigating the case in various angle.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm