ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 12:15 pm
HK News Staffer
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm