ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm