ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm