ಬ್ರೇಕಿಂಗ್ ನ್ಯೂಸ್
29-04-24 11:50 am Bangalore Correspondent ಕ್ರೈಂ
ಬೆಂಗಳೂರು, ಎ.28: ಫ್ಲ್ಯಾಟ್ ಮೇಲೆ ಲಕ್ಷಾಂತರ ರೂ. ಸಾಲ ಮಾಡಿದ್ದಲ್ಲದೆ, ಮರುಪಾವತಿ ಮಾಡದೆ ವಂಚಿಸಿದ್ದ ಮಾಲೀಕ, ಅದೇ ಫ್ಲ್ಯಾಟನ್ನು ಮತ್ತೊಬ್ಬರಿಗೆ 40 ಲಕ್ಷ ರೂ. ಬೆಲೆಗೆ ಲೀಸಿಗೆ ನೀಡಿ ಮತ್ತೊಂದು ವಂಚನೆ ಎಸಗಿದ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೀಡಾದ ಲ್ಯಾಂಗ್ಫೋರ್ಡ್ ರಸ್ತೆಯ ರೋಹನ್ ಎಂಬವರು ವಂಚನೆಗೆ ಸಂಬಂಧಿಸಿ ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು. ಕೋರ್ಟ್ ನಿರ್ದೇಶನದಂತೆ, ಫ್ಲ್ಯಾಟ್ ಮಾಲೀಕ ಆರೋಪಿ ಮೊಹಮ್ಮದ್ ಅಲೀಮುದ್ದೀನ್ (32) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹೈದರಾಬಾದ್ ಮೂಲದ ಉದ್ಯಮಿಯಾಗಿರುವ ಆರೋಪಿ ಅಲೀಮುದ್ದೀನ್, ಲ್ಯಾಂಗ್ಫೋರ್ಡ್ ರಸ್ತೆಯ ಬೈಡ್ ಸ್ಟ್ರೀಟ್ನಲ್ಲಿ ವಸತಿ ಸಮುಚ್ಚಯದಲ್ಲಿ ಮನೆ ಹೊಂದಿದ್ದರು. ಬಳಿಕ ಅದೇ ಫ್ಲ್ಯಾಟ್ ಅನ್ನು ಎಸ್ ಬಿಐ ಬ್ಯಾಂಕಿಗೆ ಅಡವಿಟ್ಟು ಸಾಲ ಪಡೆದಿದ್ದರು. ಸಾಲದ ಕಂತನ್ನು ಸರಿಯಾಗಿ ಪಾವತಿ ಮಾಡುತ್ತಿರಲಿಲ್ಲ. ಇದರ ನಡುವಲ್ಲೇ ಫ್ಲ್ಯಾಟ್ ಅನ್ನು ರೋಹನ್ ಹಾಗೂ ಅವರ ಪತ್ನಿ ಹೆಸರಿಗೆ ಭೋಗ್ಯಕ್ಕೆ ನೀಡಿದ್ದರು. ಅವರಿಂದ ₹40 ಲಕ್ಷ ಪಡೆದಿದ್ದು ಈಗ ಬ್ಯಾಂಕ್ ನೋಟಿಸ್ ಬರುತ್ತಿದ್ದಂತೆ ಫ್ಲಾಟಿನ ನಿಜ ವಿಚಾರ ಗೊತ್ತಾಗಿದೆ.
ಭೋಗ್ಯದ ಹಣ ಪಡೆದಿರುವ ಅಲೀಮುದ್ದೀನ್, ಬೆಂಗಳೂರು ನಗರ ಬಿಟ್ಟು ಪರಾರಿಯಾಗಿದ್ದಾರೆ. ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ. ಬ್ಯಾಂಕ್ ಅಧಿಕಾರಿಗಳು, ಫ್ಲ್ಯಾಟ್ ಜಪ್ತಿ ಮಾಡಲು ಹಲವು ಬಾರಿ ನೋಟಿಸ್ ನೀಡಿದ್ದು ಅದಕ್ಕೆ ಅಲೀಮುದ್ದೀನ್ ಉತ್ತರ ನೀಡಿರಲಿಲ್ಲ. ಹೀಗಾಗಿ, ಆಸ್ತಿ ಜಪ್ತಿ ಮಾಡಲು ಬ್ಯಾಂಕ್ ಅಧಿಕಾರಿಗಳು ನ್ಯಾಯಾಲಯದಿಂದ ಆದೇಶ ಪಡೆದಿರುವುದಾಗಿ ಗೊತ್ತಾಗಿದೆ.
ಮನೆಗೆ ಲಕ್ಷಾಂತರ ರೂ. ಸಾಲ ಬಾಕಿ ಇರುವ ಮಾಹಿತಿಯನ್ನು ಮುಚ್ಚಿಟ್ಟಿದ್ದ ಅಲೀಮುದ್ದೀನ್, ಭೋಗ್ಯದ ಹೆಸರಿನಲ್ಲಿ ಮತ್ತೆ ವಂಚಿಸಿರುವುದಾಗಿ ದೂರುದಾರರು ಆರೋಪಿಸಿದ್ದಾರೆ.
Businessman cheats couple by giving house on lease after cheating Bank of 40 lakhs loan in Bangalore.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm