ಬ್ರೇಕಿಂಗ್ ನ್ಯೂಸ್
29-04-24 11:50 am Bangalore Correspondent ಕ್ರೈಂ
ಬೆಂಗಳೂರು, ಎ.28: ಫ್ಲ್ಯಾಟ್ ಮೇಲೆ ಲಕ್ಷಾಂತರ ರೂ. ಸಾಲ ಮಾಡಿದ್ದಲ್ಲದೆ, ಮರುಪಾವತಿ ಮಾಡದೆ ವಂಚಿಸಿದ್ದ ಮಾಲೀಕ, ಅದೇ ಫ್ಲ್ಯಾಟನ್ನು ಮತ್ತೊಬ್ಬರಿಗೆ 40 ಲಕ್ಷ ರೂ. ಬೆಲೆಗೆ ಲೀಸಿಗೆ ನೀಡಿ ಮತ್ತೊಂದು ವಂಚನೆ ಎಸಗಿದ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೀಡಾದ ಲ್ಯಾಂಗ್ಫೋರ್ಡ್ ರಸ್ತೆಯ ರೋಹನ್ ಎಂಬವರು ವಂಚನೆಗೆ ಸಂಬಂಧಿಸಿ ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು. ಕೋರ್ಟ್ ನಿರ್ದೇಶನದಂತೆ, ಫ್ಲ್ಯಾಟ್ ಮಾಲೀಕ ಆರೋಪಿ ಮೊಹಮ್ಮದ್ ಅಲೀಮುದ್ದೀನ್ (32) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹೈದರಾಬಾದ್ ಮೂಲದ ಉದ್ಯಮಿಯಾಗಿರುವ ಆರೋಪಿ ಅಲೀಮುದ್ದೀನ್, ಲ್ಯಾಂಗ್ಫೋರ್ಡ್ ರಸ್ತೆಯ ಬೈಡ್ ಸ್ಟ್ರೀಟ್ನಲ್ಲಿ ವಸತಿ ಸಮುಚ್ಚಯದಲ್ಲಿ ಮನೆ ಹೊಂದಿದ್ದರು. ಬಳಿಕ ಅದೇ ಫ್ಲ್ಯಾಟ್ ಅನ್ನು ಎಸ್ ಬಿಐ ಬ್ಯಾಂಕಿಗೆ ಅಡವಿಟ್ಟು ಸಾಲ ಪಡೆದಿದ್ದರು. ಸಾಲದ ಕಂತನ್ನು ಸರಿಯಾಗಿ ಪಾವತಿ ಮಾಡುತ್ತಿರಲಿಲ್ಲ. ಇದರ ನಡುವಲ್ಲೇ ಫ್ಲ್ಯಾಟ್ ಅನ್ನು ರೋಹನ್ ಹಾಗೂ ಅವರ ಪತ್ನಿ ಹೆಸರಿಗೆ ಭೋಗ್ಯಕ್ಕೆ ನೀಡಿದ್ದರು. ಅವರಿಂದ ₹40 ಲಕ್ಷ ಪಡೆದಿದ್ದು ಈಗ ಬ್ಯಾಂಕ್ ನೋಟಿಸ್ ಬರುತ್ತಿದ್ದಂತೆ ಫ್ಲಾಟಿನ ನಿಜ ವಿಚಾರ ಗೊತ್ತಾಗಿದೆ.
ಭೋಗ್ಯದ ಹಣ ಪಡೆದಿರುವ ಅಲೀಮುದ್ದೀನ್, ಬೆಂಗಳೂರು ನಗರ ಬಿಟ್ಟು ಪರಾರಿಯಾಗಿದ್ದಾರೆ. ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ. ಬ್ಯಾಂಕ್ ಅಧಿಕಾರಿಗಳು, ಫ್ಲ್ಯಾಟ್ ಜಪ್ತಿ ಮಾಡಲು ಹಲವು ಬಾರಿ ನೋಟಿಸ್ ನೀಡಿದ್ದು ಅದಕ್ಕೆ ಅಲೀಮುದ್ದೀನ್ ಉತ್ತರ ನೀಡಿರಲಿಲ್ಲ. ಹೀಗಾಗಿ, ಆಸ್ತಿ ಜಪ್ತಿ ಮಾಡಲು ಬ್ಯಾಂಕ್ ಅಧಿಕಾರಿಗಳು ನ್ಯಾಯಾಲಯದಿಂದ ಆದೇಶ ಪಡೆದಿರುವುದಾಗಿ ಗೊತ್ತಾಗಿದೆ.
ಮನೆಗೆ ಲಕ್ಷಾಂತರ ರೂ. ಸಾಲ ಬಾಕಿ ಇರುವ ಮಾಹಿತಿಯನ್ನು ಮುಚ್ಚಿಟ್ಟಿದ್ದ ಅಲೀಮುದ್ದೀನ್, ಭೋಗ್ಯದ ಹೆಸರಿನಲ್ಲಿ ಮತ್ತೆ ವಂಚಿಸಿರುವುದಾಗಿ ದೂರುದಾರರು ಆರೋಪಿಸಿದ್ದಾರೆ.
Businessman cheats couple by giving house on lease after cheating Bank of 40 lakhs loan in Bangalore.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm