ಬ್ರೇಕಿಂಗ್ ನ್ಯೂಸ್
01-05-24 06:44 pm Mangalore Correspondent ಕ್ರೈಂ
ಬಂಟ್ವಾಳ, ಮೇ 1: ಮೆಲ್ಕಾರ್ ಬಳಿ ನಡೆದ ಕೋಮು ದ್ವೇಷದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ 30 ಸಾವಿರ ರೂ. ದಂಡ ವಿಧಿಸಿದೆ.
ಬಂಟ್ವಾಳ ತಾಲೂಕು ಮಂಚಿ ಗ್ರಾಮದ ವಿಜಿತ್ ಕುಮಾರ್ (31), ಅಭಿ ಯಾನೆ ಅಭಿಜಿತ್ (33) ಮಂಗಳೂರು ತಾಲೂಕು ಬಡಗ ಉಳಿಪ್ಪಾಡಿ ಗ್ರಾಮದ ಮಳಲಿ ಮಟ್ಟಿಮನೆ ಕಿರಣ್ ಪೂಜಾರಿ (33), ತಿರುವೈಲು ಗ್ರಾಮದ ಅನೀಶ್ ಯಾನೆ ಧನು (32) ಶಿಕ್ಷೆಗೊಳಗಾದವರು.
ಪ್ರಕರಣದಲ್ಲಿ ಒಟ್ಟು 29 ಸಾಕ್ಷಿದಾರರನ್ನು ವಿಚಾರಿಸಿದ್ದು, 40 ಸಾಕ್ಷಿಗಳನ್ನು ಗುರುತಿಸಲಾಗಿತ್ತು. ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ವಾದ-ಪ್ರತಿವಾದವನ್ನು ಆಲಿಸಿ, ನಾಲ್ವರು ಆರೋಪಿಗಳು ದೋಷಿಗಳೆಂದು ಎ. 8ರಂದು ತೀರ್ಪು ನೀಡಿದ್ದರು. ಎ.30ರಂದು ಶಿಕ್ಷೆ ಪ್ರಕಟಿಸಿದ್ದಾರೆ.
ಐಪಿಸಿ ಕಲಂ 302 ಮತ್ತು ಕಲಂ 120 (ಬಿ)ಯಡಿ ಜೀವಾವಧಿ ಶಿಕ್ಷೆ ಮತ್ತು ತಲಾ 25 ಸಾವಿರ ರೂ. ದಂಡ, ದಂಡ ಪಾವತಿಸಲು ವಿಫಲರಾದರೆ 1 ವರ್ಷ ಹೆಚ್ಚುವರಿ ಜೈಲು, ಕಲಂ 307 ಮತ್ತು ಸಹವಾಚಕ ಕಲಂ120 (ಬಿ)ಯಡಿ 5 ವರ್ಷ ಜೈಲು ಮತ್ತು ತಲಾ 5 ಸಾವಿರ ರೂ. ದಂಡ, ದಂಡ ಪಾವತಿಗೆ ವಿಫಲನಾದರೆ 6 ತಿಂಗಳ ಹೆಚ್ಚುವರಿ ಜೈಲು, ಕಲಂ 341 ಮತ್ತು ಸಹವಾಚಕ ಕಲಂ120 (ಬಿ)ಯಡಿ 1 ತಿಂಗಳ ಜೈಲು, ಕಲಂ 324, ಸಹವಾಚಕ ಕಲಂ 120 (ಬಿ)ಯಡಿ 1 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ದಂಡದ ಮೊತ್ತ 1.20 ಲಕ್ಷ ರೂ. ವನ್ನು ಕೊಲೆಗೀಡಾದ ಮಹಮ್ಮದ್ ನಾಸಿರ್ ಅವರ ಪತ್ನಿ ರಹಮತ್ ಯಾನೆ ರಮ್ಲತ್ಗೆ ನೀಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಂತ್ರಸ್ತ ಪರಿಹಾರ ಯೋಜನೆಯಡಿ ಮೃತರ ಪತ್ನಿ ಮತ್ತು ಗಾಯಾಳು ಮುಸ್ತಾಫ ಅವರಿಗೆ ಪರಿಹಾರ ನೀಡಬೇಕು ಎಂದು ತೀರ್ಪಿನಲ್ಲಿ ನಿರ್ದೇಶನ ನೀಡಲಾಗಿದೆ. ಸರಕಾರದ ಪರ ಶೇಖರ ಶೆಟ್ಟಿ ಸಾಕ್ಷಿ ವಿಚಾರಣೆ ಮಾಡಿದ್ದು, ಜುಡಿತ್ ಓಲ್ಗಾ ಮಾರ್ಗರೆಟ್ ಕ್ರಾಸ್ತ ಅವರು ವಾದ ಮಂಡಿಸಿದ್ದರು.
2015ರ ಆಗಸ್ಟ್ 6ರಂದು ಮೊಹಮ್ಮದ್ ಮುಸ್ತಫಾ ಮತ್ತು ಮಹಮ್ಮದ್ ನಾಸೀರ್ ಮೆಲ್ಕಾರ್ ಕಡೆಯಿಂದ ಆಟೋ ಹತ್ತಿದ್ದು ಮುಡಿಪು ಕಡೆಗೆ ಹೊರಟಿದ್ದರು. ಆಟೋದಲ್ಲಿ ತೆರಳುತ್ತಿದ್ದಾಗ ರಾತ್ರಿ 10.45ಕ್ಕೆ ಬಂಟ್ವಾಳ ತಾಲೂಕು ಸಜಿಪಮೂಡ ಗ್ರಾಮದ ಕೊಳಕೆ ಕಂದೂರು ಎಂಬಲ್ಲಿಗೆ ತಲುಪುತ್ತಿದ್ದಂತೆ ನಾಲ್ವರು ಆರೋಪಿಗಳು ಬೈಕಿನಲ್ಲಿ ಬಂದು ಅಡ್ಡಗಟ್ಟಿದ್ದು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ್ದರು. ತೀವ್ರ ಗಾಯಗೊಂಡ ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಸೀರ್ ಅಹಮ್ಮದ್ ಮರುದಿನ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.
Four persons sentenced to life imprisonment in communal murder case at Melkar Bantwal Mangalore. Those convicted are Vijeth Kumar, 22, from Manchi; Kiran Poojary, 24, from Badaga Ulipady; Anish alias Dhanu, 23, from Tiruvail; and Abhi alias Abhijith, 24, from Manchi. They have been convicted for the murder of Mohammed Naseer alias Naseer. Public prosecutor Judith OM Crasta said that the court sentenced the four accused under IPC section 302 to life imprisonment and imposed a fine of Rs 25,000 each.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm