ಬ್ರೇಕಿಂಗ್ ನ್ಯೂಸ್
04-05-24 12:23 pm HK News Desk ಕ್ರೈಂ
ಹುಬ್ಬಳ್ಳಿ , ಮೇ 04: ಅಪ್ರಾಪ್ತೆಯನ್ನು ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಗರ್ಭಿಣಿಯನ್ನಾಗಿ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ಯುವಕ ಸದ್ದಾಂಹುಸೇನ ಲಿಂಬುವಾಲೆ ಬಂಧಿತ ಆರೋಪಿ. ನವನಗರ ಠಾಣಾ ವ್ಯಾಪ್ತಿಯ 17 ವರ್ಷದ ಯುವತಿಗೆ ಮೋಸ ಮಾಡಿದ್ದಾನೆಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ.ಅಪ್ರಾಪ್ತೆ ಇಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಪೋಷಕರು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ ಎನ್ನಲಾಗಿದೆ. ಈ ಕುರಿತು ಬಲವಂತವಾಗಿ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರು ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು. ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎಪಿಎಂಸಿ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ತನಿಖೆ ಕೈಗೊಂಡ ಪೊಲೀಸರು ಆರೋಪಿ ಸದ್ದಾಂಹುಸೇನ ಲಿಂಬುವಾಲೆ ನನ್ನ ತಕ್ಷಣ ವಶಕ್ಕೆ ಪಡೆದಿದ್ದರು. ಬಂಧನ ಪ್ರಕ್ರಿಯೆಗೆ ಶುಕ್ರವಾರ ರಾತ್ರಿ ಸುತಗಟ್ಟಿ ಗ್ರಾಮಕ್ಕೆ ತೆರಳಿದಾಗ, ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆ ವೇಳೆ ಪೊಲೀಸರು ಅವನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ಸಿಬ್ಬಂದಿ ಅರುಣ್ ಹಾಗೂ ಇನ್ಸ್ಪೆಕ್ಟರ್ ಅವರ ಕಾಲಿಗೆ ಗಾಯವಾಗಿದೆ. ತಕ್ಷಣ ಇನ್ಸ್ಪೆಕ್ಟರ್ ಸಂಗಮೇಶ ಡಿಂಗಿನಾಳ ಆತ್ಮರಕ್ಷಣೆಗಾಗಿ ಗಾಳಿಯಲ್ಲಿ ಒಂದು ಗುಂಡು ಹಾರಿಸಿ, ಮತ್ತೊಂದು ಗುಂಡನ್ನು ಆರೋಪಿಯ ಎಡಗಾಲಿಗೆ ಹೊಡೆದಿದ್ದಾರೆ. ಆರೋಪಿಯನ್ನ ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಕಿಮ್ಸ್ಗೆ ರವಾನಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ತಿಳಿಸಿದ್ದಾರೆ.
Hubballi 19 year old youth arrested over rape charges of minor girl after she turns pregnant, Hindi activist held protest in hubballi against the safety of Hindu girls. Accused Saddam Hussain Limbuwale was shot to his leg as we tried to escape.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm