ಬ್ರೇಕಿಂಗ್ ನ್ಯೂಸ್
04-05-24 11:03 pm HK News Desk ಕ್ರೈಂ
ಚೆನ್ನೈ, ಮೇ.4: ದಕ್ಷಿಣ ತಮಿಳುನಾಡಿನ ತಿರುನಲ್ವೇಲಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬರ್ಬರವಾಗಿ ಕೊಲೆಗೈದ ಶಂಕೆ ವ್ಯಕ್ತವಾಗಿದ್ದು, ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಿರುನಲ್ವೇಲಿ ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಬಿಕೆ ಜಯಕುಮಾರ್ ಧನಸಿಂಗ್ ಕೊಲೆಯಾದವರು.
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಧನಸಿಂಗ್ ಮನೆ ಸಮೀಪದ ತೋಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಉವಾರಿ ಪೊಲೀಸ್ ಠಾಣೆಯ ಕರೈಚಿತ್ತುಪುದೂರು ಎಂಬಲ್ಲಿನ ತೋಟದಲ್ಲಿ ಪೂರ್ತಿ ಸುಟ್ಟು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಗುರುವಾರ ಸಂಜೆಯಿಂದ ಮಿಸ್ಸಿಂಗ್ ಆಗಿದ್ದ ಜಯಕುಮಾರ್ ಬಗ್ಗೆ ಮಗ ಕರುತ್ತಯ್ಯ ಜೆಫ್ರಿನ್ ಪೊಲೀಸ್ ದೂರು ನೀಡಿದ್ದರು. ಕೈಕಾಲುಗಳನ್ನು ಇಲೆಕ್ಟ್ರಿಕ್ ವಯರ್ ನಲ್ಲಿ ಕಟ್ಟಿ ಹಾಕಿದ್ದು, ಅವು ಬೆಂಕಿಯಲ್ಲಿ ಸುಟ್ಟು ಹೋಗಿದೆ. ತಾಮ್ರದ ವಯರಿನಲ್ಲಿ ಶವವನ್ನು ಕಟ್ಟಿದ ರೀತಿ ಕಂಡುಬಂದಿದೆ.
ಯಾರೋ ದುಷ್ಕರ್ಮಿಗಳು ಕೊಲೆಗೈದು ಕುರುಹು ನಾಶಪಡಿಸುವ ಉದ್ದೇಶದಲ್ಲಿ ಸುಟ್ಟು ಹಾಕಿದ್ದಾರೆ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಎಪ್ರಿಲ್ 30ರಂದು ಜೀವ ಬೆದರಿಕೆ ಇರುವ ಬಗ್ಗೆ ಜಯಕುಮಾರ್ ಪೊಲೀಸ್ ದೂರು ನೀಡಿದ್ದರು. ಹಾಲಿ ಶಾಸಕ ಸೇರಿದಂತೆ ಎಂಟು ಮಂದಿ ಕಾಂಗ್ರೆಸ್ ಮುಖಂಡರ ಬಗ್ಗೆ ದೂರು ನೀಡಿದ್ದರು. ಹಣಕಾಸು ವಿಚಾರದಲ್ಲಿ ವಿವಾದ ಇರುವ ಬಗ್ಗೆ ಹೇಳಿಕೊಂಡಿದ್ದರು. ಮನೆಯ ಆವರಣದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ಅಡ್ಡಾಡುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದರು.
The half burnt body of K P K Jeyakumar Dhanasingh, the head of Congress’ Tirunelveli (East) unit, was found on Saturday at his farm in Karaichuthupudur near Thisayanvilai, with police suspecting foul play in his death.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm