ಬ್ರೇಕಿಂಗ್ ನ್ಯೂಸ್
05-05-24 02:44 pm HK News Desk ಕ್ರೈಂ
ಕಾರವಾರ, ಮೇ.5: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.
ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.
ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.
ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.
ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.
Karwar Dandeli Wife throws 6 year old baby to water canal, body found. She was angry and frustrated by husbands behaviour, the baby was said to be mute.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm