ಬ್ರೇಕಿಂಗ್ ನ್ಯೂಸ್
05-05-24 02:44 pm HK News Desk ಕ್ರೈಂ
ಕಾರವಾರ, ಮೇ.5: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.
ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.
ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.
ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.
ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.
Karwar Dandeli Wife throws 6 year old baby to water canal, body found. She was angry and frustrated by husbands behaviour, the baby was said to be mute.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm