ಬ್ರೇಕಿಂಗ್ ನ್ಯೂಸ್
07-05-24 09:48 pm Bangalore Correspondent ಕ್ರೈಂ
ಬೆಂಗಳೂರು, ಮೇ.7: ಖಾಸಗಿ ಕಂಪನಿಯಲ್ಲಿ ಡೈರೆಕ್ಟರ್ ಹುದ್ದೆಯಲ್ಲಿರುವ ಬೆಂಗಳೂರಿನ ಜಯನಗರ ನಿವಾಸಿ 52 ವರ್ಷದ ವ್ಯಕ್ತಿಯೊಬ್ಬರು ಷೇರು ಮಾರ್ಕೆಟಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಲಾಭ ಆಗುತ್ತೆ ಎಂಬ ವಂಚಕರ ಮಾತು ಕೇಳಿ ಬರೋಬ್ಬರಿ 5.2 ಕೋಟಿ ರೂಪಾಯಿ ಹಣವನ್ನು ಕಳಕೊಂಡಿದ್ದಾರೆ.
ಹಣ ಕಳಕೊಂಡ ವ್ಯಕ್ತಿ ಎಪ್ರಿಲ್ 8ರಂದು ಬೆಂಗಳೂರು ಸಿಇಎನ್ ಠಾಣೆಗೆ ದೂರು ನೀಡಿ, ತನಗಾದ ವಂಚನೆಯನ್ನು ಹೇಳಿಕೊಂಡಿದ್ದಾರೆ. ಮಾರ್ಚ್ 11ರಂದು ಇವರಿಗೆ ವಾಟ್ಸಪ್ ಮೆಸೇಜ್ ಒಂದು ಬಂದಿತ್ತು. ಸ್ಟಾಕ್ ಮಾರ್ಕೆಟ್ ಹೂಡಿಕೆ ಬಗ್ಗೆ ಇದ್ದ ಮೆಸೇಜ್ ನಲ್ಲಿ bys.app.com ಎನ್ನುವ ವೆಬ್ ಸೈಟ್ ಲಿಂಕ್ ಕೂಡ ಇತ್ತು. ಅದಕ್ಕೆ ಕ್ಲಿಕ್ ಮಾಡಿದ ಕೂಡಲೇ ಇವರ ನಂಬರ್ Y-5 Ever Core Financial Leader ಎಂಬ ಹೆಸರಿನಲ್ಲಿದ್ದ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿತ್ತು. ಅದರಲ್ಲಿ ಅಂದಾಜು 160 ಮಂದಿ ಸದಸ್ಯರಿದ್ದರು.
ಇದೇ ವೇಳೆ, ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ನೀವು ಅದರಲ್ಲಿ ಕೊಟ್ಟಿರುವ ಲಿಂಕ್ ಒತ್ತಿ ಸ್ಟಾಕ್ ಮಾರ್ಕೆಟ್ ಏಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಹೇಳಿದ್ದರು. ಏಪ್ ಡೌನ್ಲೋಡ್ ಮಾಡಿಕೊಂಡಿದ್ದ ವ್ಯಕ್ತಿ, ಬಳಿಕ ಅವರು ಹೇಳಿದಂತೆ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದರು. ಕೆಲವೇ ವಾರಗಳಲ್ಲಿ 5.2 ಕೋಟಿಯಷ್ಟು ರೂಪಾಯಿ ಹಣವನ್ನು ತನ್ನ ವಿವಿಧ ಐದು ಬ್ಯಾಂಕ್ ಖಾತೆಗಳಿಂದ ಹೂಡಿಕೆ ಮಾಡಿದ್ದರು. ಮತ್ತಷ್ಟು ಹಣವನ್ನು ಅದರಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದರು. ಮಾರ್ಕೆಟ್ ಅಪ್ ಆಗಿರುವುದನ್ನು ತಿಳಿದ ಈ ವ್ಯಕ್ತಿ ಎಪ್ರಿಲ್ 2ರಂದು ಒಂದಷ್ಟು ಹಣವನ್ನು ಮರಳಿ ಹಿಂಪಡೆಯಲು ಯತ್ನಿಸಿದ್ದು, ಆದರೆ ಹಣ ಹಿಂಪಡೆಯುವುದು ಸಾಧ್ಯವಾಗಲಿಲ್ಲ. ಬೇರೆಯವರಲ್ಲಿ ಈ ಬಗ್ಗೆ ಕೇಳಿದಾಗ, ಅದೇನೋ ಮೋಸದ ಆಟ ಎನ್ನುವ ವಿಚಾರ ಗೊತ್ತಾಗಿದೆ. ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿ ಮೋಸ ಹೋಗಿದ್ದೇನೆಂದು ತಿಳಿದು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಕೋಟ್ಯಂತರ ರೂಪಾಯಿ ಹಣ ಕಳಕೊಂಡಿದ್ದರಿಂದ ಇಡಿ ಮತ್ತು ಐಟಿ ಅಧಿಕಾರಿಗಳು ಇದರ ಬಗ್ಗೆ ತನಿಖೆಗೆ ಮುಂದಾಗುವ ಸಾಧ್ಯತೆಯಿದೆ. ಅಲ್ಲದೆ, ಮೋಸಗಾರರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿ ಹಣವನ್ನು ಮುಟ್ಟುಗೋಲು ಹಾಕಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಸ್ಟಾಕ್ ಮಾರ್ಕೆಟ್ ಹೂಡಿಕೆ ಎಂಬ ಹೆಸರಲ್ಲಿ ವಾಟ್ಸಪ್ ನಲ್ಲಿ ಮೆಸೇಜ್ ಕಳುಹಿಸುವುದು, ಕರೆ ಮಾಡಿ ಒತ್ತಾಯ ಪಡಿಸುವ ಕೃತ್ಯಗಳು ಹೆಚ್ಚಿದ್ದು, ವಿದ್ಯಾವಂತರೇ ಈ ಮೋಸದ ಜಾಲಕ್ಕೆ ಬಲಿ ಬೀಳುತ್ತಿದ್ದಾರೆ.
In a recent case of cyber fraud, a 52-year-old Bengaluru businessman, identified as Sharath (name changed), residing in Jayanagar, Bengaluru fell victim to a scam involving the stock market, resulting in a loss of Rs 5.2 crore, according to a report.
25-03-26 03:25 pm
HK News Staffer
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 03:49 pm
HK News Staffer
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm