ಬ್ರೇಕಿಂಗ್ ನ್ಯೂಸ್
07-05-24 09:48 pm Bangalore Correspondent ಕ್ರೈಂ
ಬೆಂಗಳೂರು, ಮೇ.7: ಖಾಸಗಿ ಕಂಪನಿಯಲ್ಲಿ ಡೈರೆಕ್ಟರ್ ಹುದ್ದೆಯಲ್ಲಿರುವ ಬೆಂಗಳೂರಿನ ಜಯನಗರ ನಿವಾಸಿ 52 ವರ್ಷದ ವ್ಯಕ್ತಿಯೊಬ್ಬರು ಷೇರು ಮಾರ್ಕೆಟಲ್ಲಿ ಹಣ ಹೂಡಿಕೆ ಮಾಡಿ, ಡಬಲ್ ಲಾಭ ಆಗುತ್ತೆ ಎಂಬ ವಂಚಕರ ಮಾತು ಕೇಳಿ ಬರೋಬ್ಬರಿ 5.2 ಕೋಟಿ ರೂಪಾಯಿ ಹಣವನ್ನು ಕಳಕೊಂಡಿದ್ದಾರೆ.
ಹಣ ಕಳಕೊಂಡ ವ್ಯಕ್ತಿ ಎಪ್ರಿಲ್ 8ರಂದು ಬೆಂಗಳೂರು ಸಿಇಎನ್ ಠಾಣೆಗೆ ದೂರು ನೀಡಿ, ತನಗಾದ ವಂಚನೆಯನ್ನು ಹೇಳಿಕೊಂಡಿದ್ದಾರೆ. ಮಾರ್ಚ್ 11ರಂದು ಇವರಿಗೆ ವಾಟ್ಸಪ್ ಮೆಸೇಜ್ ಒಂದು ಬಂದಿತ್ತು. ಸ್ಟಾಕ್ ಮಾರ್ಕೆಟ್ ಹೂಡಿಕೆ ಬಗ್ಗೆ ಇದ್ದ ಮೆಸೇಜ್ ನಲ್ಲಿ bys.app.com ಎನ್ನುವ ವೆಬ್ ಸೈಟ್ ಲಿಂಕ್ ಕೂಡ ಇತ್ತು. ಅದಕ್ಕೆ ಕ್ಲಿಕ್ ಮಾಡಿದ ಕೂಡಲೇ ಇವರ ನಂಬರ್ Y-5 Ever Core Financial Leader ಎಂಬ ಹೆಸರಿನಲ್ಲಿದ್ದ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿತ್ತು. ಅದರಲ್ಲಿ ಅಂದಾಜು 160 ಮಂದಿ ಸದಸ್ಯರಿದ್ದರು.
ಇದೇ ವೇಳೆ, ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ನೀವು ಅದರಲ್ಲಿ ಕೊಟ್ಟಿರುವ ಲಿಂಕ್ ಒತ್ತಿ ಸ್ಟಾಕ್ ಮಾರ್ಕೆಟ್ ಏಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಹೇಳಿದ್ದರು. ಏಪ್ ಡೌನ್ಲೋಡ್ ಮಾಡಿಕೊಂಡಿದ್ದ ವ್ಯಕ್ತಿ, ಬಳಿಕ ಅವರು ಹೇಳಿದಂತೆ ಸ್ಟಾಕ್ ಮಾರ್ಕೆಟ್ ಹೆಸರಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದರು. ಕೆಲವೇ ವಾರಗಳಲ್ಲಿ 5.2 ಕೋಟಿಯಷ್ಟು ರೂಪಾಯಿ ಹಣವನ್ನು ತನ್ನ ವಿವಿಧ ಐದು ಬ್ಯಾಂಕ್ ಖಾತೆಗಳಿಂದ ಹೂಡಿಕೆ ಮಾಡಿದ್ದರು. ಮತ್ತಷ್ಟು ಹಣವನ್ನು ಅದರಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದರು. ಮಾರ್ಕೆಟ್ ಅಪ್ ಆಗಿರುವುದನ್ನು ತಿಳಿದ ಈ ವ್ಯಕ್ತಿ ಎಪ್ರಿಲ್ 2ರಂದು ಒಂದಷ್ಟು ಹಣವನ್ನು ಮರಳಿ ಹಿಂಪಡೆಯಲು ಯತ್ನಿಸಿದ್ದು, ಆದರೆ ಹಣ ಹಿಂಪಡೆಯುವುದು ಸಾಧ್ಯವಾಗಲಿಲ್ಲ. ಬೇರೆಯವರಲ್ಲಿ ಈ ಬಗ್ಗೆ ಕೇಳಿದಾಗ, ಅದೇನೋ ಮೋಸದ ಆಟ ಎನ್ನುವ ವಿಚಾರ ಗೊತ್ತಾಗಿದೆ. ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿ ಮೋಸ ಹೋಗಿದ್ದೇನೆಂದು ತಿಳಿದು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಕೋಟ್ಯಂತರ ರೂಪಾಯಿ ಹಣ ಕಳಕೊಂಡಿದ್ದರಿಂದ ಇಡಿ ಮತ್ತು ಐಟಿ ಅಧಿಕಾರಿಗಳು ಇದರ ಬಗ್ಗೆ ತನಿಖೆಗೆ ಮುಂದಾಗುವ ಸಾಧ್ಯತೆಯಿದೆ. ಅಲ್ಲದೆ, ಮೋಸಗಾರರ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿ ಹಣವನ್ನು ಮುಟ್ಟುಗೋಲು ಹಾಕಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಸ್ಟಾಕ್ ಮಾರ್ಕೆಟ್ ಹೂಡಿಕೆ ಎಂಬ ಹೆಸರಲ್ಲಿ ವಾಟ್ಸಪ್ ನಲ್ಲಿ ಮೆಸೇಜ್ ಕಳುಹಿಸುವುದು, ಕರೆ ಮಾಡಿ ಒತ್ತಾಯ ಪಡಿಸುವ ಕೃತ್ಯಗಳು ಹೆಚ್ಚಿದ್ದು, ವಿದ್ಯಾವಂತರೇ ಈ ಮೋಸದ ಜಾಲಕ್ಕೆ ಬಲಿ ಬೀಳುತ್ತಿದ್ದಾರೆ.
In a recent case of cyber fraud, a 52-year-old Bengaluru businessman, identified as Sharath (name changed), residing in Jayanagar, Bengaluru fell victim to a scam involving the stock market, resulting in a loss of Rs 5.2 crore, according to a report.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm