ಬ್ರೇಕಿಂಗ್ ನ್ಯೂಸ್
08-05-24 11:33 am Mangalore Correspondent ಕ್ರೈಂ
ಮಂಗಳೂರು, ಮೇ 8: ನಗರದ ಬಾವುಟಗುಡ್ಡೆಯ ಕೆಎಂಸಿ ಮೆಡಿಕಲ್ ಕಾಲೇಜಿನ ಡೆಂಟಲ್ ವಿಭಾಗಕ್ಕೆ ಬಂದಿದ್ದ 17 ವರ್ಷದ ಹುಡುಗನೊಬ್ಬ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿ ಸಿಕ್ಕಿಬಿದ್ದಿದ್ದಾನೆ.
ಮಂಗಳವಾರ ಬೆಳಗ್ಗೆ ಹಲ್ಲಿನ ಚಿಕಿತ್ಸೆಗೆಂದು ಹುಡುಗ ಬಂದಿದ್ದ. ಈ ಹಿಂದೆಯೂ ತಾಯಿ ಜೊತೆಗೆ ಚಿಕಿತ್ಸೆಗಾಗಿ ಬರುತ್ತಿದ್ದ. ನಿನ್ನೆ ಒಬ್ಬನೇ ಬಂದಿದ್ದು, ತಾಯಿಯ ಮೊಬೈಲನ್ನು ತೆಗೆದುಕೊಂಡು ಬಂದಿದ್ದ. ಟ್ರೀಟ್ಮೆಂಟ್ ಹೋಗುವುದಕ್ಕೂ ಮುನ್ನ ಮೊಬೈಲನ್ನು ಲೇಡಿಸ್ ಟಾಯ್ಲೆಟಲ್ಲಿ ಮೇಲೆ ಇಟ್ಟು ಹೋಗಿದ್ದಾನೆ. ಆದರೆ, ಸೈಲಂಟ್ ಮೋಡಲ್ಲಿ ಇಡುವುದಕ್ಕೆ ಮರೆತಿದ್ದ. ಕೆಲ ಹೊತ್ತಿನಲ್ಲೇ ಮೊಬೈಲ್ ರಿಂಗಣಿಸಿತ್ತು. ಪದೇ ಪದೇ ಮೊಬೈಲ್ ಟಾಯ್ಲೆಟ್ ಒಳಗಿನಿಂದ ರಿಂಗ್ ಆಗುತ್ತಿದ್ದುದನ್ನು ಸೆಕ್ಯುರಿಟಿ ಸಿಬಂದಿ ಗಮನಿಸಿದ್ದು, ಒಳಗೆ ಹೋಗಿ ನೋಡಿದಾಗ ಮೇಲೆ ಇಟ್ಟಿದ್ದ ಮೊಬೈಲ್ ಕಾಣ ಸಿಕ್ಕಿದೆ.
ಬಳಿಕ ಸಿಸಿಟಿವಿ ಗಮನಿಸಿದಾಗ, ಹುಡುಗನ ಚಹರೆ ಸಿಕ್ಕಿದ್ದು ಬಂದರು ಪೊಲೀಸರನ್ನು ಸ್ಥಳಕ್ಕೆ ಕರೆಸಿದ್ದಾರೆ. ಉಡುಪಿ ಜಿಲ್ಲೆಯ ಕಾಪು ಮೂಲದ ಮುಸ್ಲಿಂ ಹುಡುಗನಾಗಿದ್ದು, ಸುರತ್ಕಲ್ ನಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಾನೆ. ತಾಯಿ ಜೊತೆಗೆ ಹಲ್ಲಿನ ಚಿಕಿತ್ಸೆಗೆ ಬರುತ್ತಿದ್ದ ಹುಡುಗ ನಿನ್ನೆ ಒಬ್ಬಂಟಿಯಾಗಿ ಬಂದು ಕತರ್ನಾಕ್ ಕೆಲಸ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ಮೊಬೈಲನ್ನು ಚೆಕ್ ಮಾಡಿದಾಗ ಯಾವುದೇ ವಿಡಿಯೋ, ಫೋಟೋ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ. ಆರೋಪಿಯನ್ನು ಜುವೆನಿಲ್ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ವರ್ಷದ ಹಿಂದೆ ಉಡುಪಿಯಲ್ಲೂ ನಡೆದಿತ್ತು
2023ರ ಜುಲೈ ತಿಂಗಳಲ್ಲಿ ಉಡುಪಿ ನಗರದ ಕಣ್ಣಿನ ಚಿಕಿತ್ಸೆಯ ಕಾಲೇಜಿನಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಮೂವರು ವಿದ್ಯಾರ್ಥಿನಿಯರು ತಮಾಷೆಗಾಗಿ ಮೊಬೈಲನ್ನು ಟಾಯ್ಲೆಟಲ್ಲಿಟ್ಟು ವಿಡಿಯೋ ಚಿತ್ರೀಕರಣಕ್ಕೆ ಯತ್ನಿಸಿದ್ದರು. ಈ ಘಟನೆ ರಾಜ್ಯಾದ್ಯಂತ ಭಾರೀ ಗದ್ದಲ, ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಆ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ವಿಪಕ್ಷಗಳ ಆರೋಪ ಜೋರಾದ ಕಾರಣ ಪ್ರಕರಣದ ತನಿಖೆಯನ್ನು ಸಿಓಡಿಗೆ ಒಪ್ಪಿಸಲಾಗಿತ್ತು.
An unsettling incident unfolded on Tuesday, May 7, at a private medical college located in the city, as a mobile phone was discovered in the women's restroom. The startling discovery came to light when the college's security guard, while conducting routine checks, noticed the mobile phone ringing persistently from within the deserted restroom. The guard confiscated the device and informed the authorities.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm