ಬ್ರೇಕಿಂಗ್ ನ್ಯೂಸ್
10-05-24 10:16 am HK News Desk ಕ್ರೈಂ
ಕೊಡಗು, ಮೇ.10: ಇಡೀ ಕರ್ನಾಟಕವನ್ನೇ ಬೆಚ್ಚಿಬೀಳಿಸೋ ಭೀಕರ ಕೊಲೆ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಗ್ರಾಮದಲ್ಲಿ ನಡೆದಿದೆ. ಇಡೀ ಎಸ್ ಎಸ್ ಎಲ್ಸಿ ಪರೀಕ್ಷೆಯಲ್ಲಿ ಶಾಲೆಗೆ 100% ಫಲಿತಾಂಶ ತಂದುಕೊಟ್ಟಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬಾಲಕಿಯ ತಲೆಯನ್ನೇ ಕತ್ತರಿಸಿ ರುಂಡ-ಮುಂಡ ಬೇರ್ಪಡಿಸಿ ಕೀಚಕ ವಿಕೃತಿ ಮೆರೆದಿದ್ದಾನೆ.
ಮೃತ ವಿದ್ಯಾರ್ಥಿನಿ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ಸಿ ವ್ಯಾಸಂಗ ಮಾಡುತ್ತಿದ್ದಳು. ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿದ್ದ ಓರ್ವ ವಿದ್ಯಾರ್ಥಿನಿ ತೇರ್ಗಡೆ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸ್ ಆಗಿದ್ದ ಪರಿಣಾಮ ಶೇಕಡಾ 100 ರಷ್ಟು ಫಲಿತಾಂಶ ಲಭ್ಯವಾಗಿತ್ತು. ಬೆಳಗ್ಗೆ SSLC ಪಾಸ್ ಆಗಿದ್ದ ಖುಷಿಯಲ್ಲಿದ್ದ ಸೂರ್ಲಬ್ಬಿ ಗ್ರಾಮದ ಬಾಲಕಿಯನ್ನು 35 ವರ್ಷದ ಓಂಕಾರಪ್ಪ ಎಂಬಾತ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಇನ್ನು, ಎಸ್ ಎಸ್ ಎಲ್ಸಿ ಪಾಸ್ ಆಗಿದ್ದ ವಿದ್ಯಾರ್ಥಿನಿಗೆ ಆರೋಪಿಯೊಂದಿಗೆ ನಿನ್ನೆ ನಿಶ್ಚಿತಾರ್ಥ ಫಿಕ್ಸ್ ಮಾಡಿದ್ದರಂತೆ. ಆದರೆ ಪೊಲೀಸರು ಮಧ್ಯ ಪ್ರವೇಶ ಮಾಡಿ ಅಪ್ರಾಪ್ತ ಬಾಲಕಿ ಆಗಿರುವ ಕಾರಣ ನಿಶ್ಚಿತಾರ್ಥ ನಿಲ್ಲಿಸಿದ್ದಂತೆ. ಘಟನೆ ಬಳಿಕ ಬಾಲಕಿಯನ್ನು ಆಕೆಯ ಪೋಷಕರು ಮನೆಗೆ ವಾಪಸ್ ಕರೆ ತಂದಿದ್ದರಂತೆ. ಆರೋಪಿ ಕೂಡ ಮನೆಗೆ ವಾಪಸ್ ಆಗಿದ್ದನಂತೆ. ಇದೇ ಸಿಟ್ಟಿನಲ್ಲಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ಬಳಿಕ ನಿನ್ನೆ ಸಂಜೆ ಮನೆಗೆ ಬಂದಿದ್ದ ಆರೋಪಿ ಬಾಲಕಿಯೊಂದಿಗೆ ಮಾತನಾಡಬೇಕು ಎಂದು ಪೋಷಕರಿಗೆ ಹೇಳಿ ಮನೆಯಿಂದ ಸ್ವಲ್ಪ ದೂರಕ್ಕೆ ಕರೆದುಕೊಂಡು ಹೋಗಿದ್ದನಂತೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ತಲೆ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ.
ವಿದ್ಯಾರ್ಥಿನಿ ತಲೆ ಕತ್ತರಿಸಿ ರುಂಡ ಮುಂಡ ಬೇರೆ ಮಾಡಿ ರುಂಡ ಒಂದು ಕಡೆ ಮುಂಡ ಒಂದು ಕಡೆ ಬಿಸಾಡಿ ಆರೋಪಿ ಎಸ್ಕೇಪ್ ಆಗಿದ್ದಾನಂತೆ. ಸದ್ಯ ಅಪ್ರಾಪ್ತ ಬಾಲಕಿ ಹತ್ಯೆ ಬಗ್ಗೆ ಕೊಡಗು ಪೋಲಿಸರು ಬಿರುಸಿನ ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಕೊಡಗು ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕಿಯ ಮೃತದೇಹ ಮಡಿಕೇರಿ ಜಿಲ್ಲಾಸ್ಪತ್ರೆಗೆ ಶವಾಗಾರಕ್ಕೆ ಶಿಫ್ಟ್ ಮಾಡಿದ್ದು, ಮರಣೋತ್ತರ ಬಳಿಕ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.
A tenth grade girl was brutally murdered by a 30-year-old man in Kodagu. In the heinous incident, the man cut off the victim's head and threw away her body. The incident was reported at Surlabbi under Madikeri Taluk in Karnataka's Kodagu district.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm