ಬ್ರೇಕಿಂಗ್ ನ್ಯೂಸ್
03-12-20 04:38 pm Headline Karnataka News Network ಕ್ರೈಂ
ಮುಂಬೈ, ಡಿ.3: ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಹಗರಣದ ರೂವಾರಿ, ಸಂಸ್ಥೆಯ ಅಧ್ಯಕ್ಷನಾಗಿದ್ದ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ನನ್ನು ಮೀರಾ ರೋಡ್ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ನಿರೀಕ್ಷಣಾ ಜಾಮೀನು ಕೋರಿ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ಮತ್ತು ಸೊಸೈಟಿಯ ನಿರ್ದೇಶಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಕೋರ್ಟ್ ಜಾಮೀನು ನಿರಾಕರಿಸಿ, ಗಿಲ್ಬರ್ಟ್ ಅರ್ಜಿಯನ್ನು ವಜಾ ಮಾಡಿತ್ತು. ಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಿಗೇ ಮುಂಬೈನ ಮೀರಾ ರೋಡ್ ಪೊಲೀಸರು ಗಿಲ್ಬರ್ಟ್ ಬ್ಯಾಪ್ಟಿಸ್ಟ್ ನನ್ನು ಬಂಧಿಸಿದ್ದಾರೆ.


ಇದಕ್ಕೂ ಮುನ್ನ ಕಳೆದ ತಿಂಗಳು ಥಾಣೆ ಕೋರ್ಟ್ ಗಿಲ್ಬರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಆಬಳಿಕ ಗಿಲ್ಬರ್ಟ್ ಸುಪ್ರೀಂ ಮೆಟ್ಟಿಲೇರಿದ್ದು ಅಲ್ಲಿಯೂ ಜಾಮೀನು ಅರ್ಜಿ ನಿರಾಕರಿಸಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಗಿಲ್ಬರ್ಟ್ ಸೇರಿ ಸೊಸೈಟಿಯ ಮೂವರು ನಿರ್ದೇಶಕರಾದ ದೀಪಕ್ ಪೂಜಾರಿ, ಲೋಯಲ್ ಬ್ಯಾಪ್ಟಿಸ್ಟ್ ಮತ್ತು ಪ್ರಕಾಶ್ ಕೋಟ್ಯಾನ್ ಅವರನ್ನು ಬಂಧಿಸಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಡಿ.8ರ ವರೆಗೆ ಕಸ್ಟಡಿ ಪಡೆದಿದ್ದಾರೆ.
ಮಲೈಕಾ ಸೊಸೈಟಿಯ ಕಚೇರಿಗಳು ಮುಂಬೈ, ಗೋವಾ, ಉಡುಪಿ, ಮಂಗಳೂರು ಸೇರಿ ಹಲವೆಡೆ ಇದ್ದು, 2 ಸಾವಿರಕ್ಕೂ ಹೆಚ್ಚು ಮಂದಿ ಹೂಡಿಕೆದಾರರಿಗೆ 350 ಕೋಟಿಗೂ ಹೆಚ್ಚು ಮೊತ್ತವನ್ನು ಪಂಗನಾಮ ಹಾಕಿದ್ದಾರೆ. ಮುಂಬೈನ ಮೀರಾ ರೋಡ್ ನಲ್ಲಿರುವ ಸೊಸೈಟಿ ಕಚೇರಿಯ ವಿರುದ್ಧ ಮೊದಲ ದೂರು ಕಳೆದ ಅಕ್ಟೋಬರ್ 2ರಂದು ಮೀರಾ ರೋಡ್ ಠಾಣೆಯಲ್ಲಿ ದಾಖಲಾಗಿತ್ತು.
ಐಪಿಸಿ ಸೆಕ್ಷನ್ ಗಳಾದ 420 (ಮೋಸ), 406 (ನಂಬಿಕೆ ದ್ರೋಹ), 34 (ಕಾಮನ್ ಇಂಟೆನ್ಷನ್) ಸೇರಿದಂತೆ ಮಹಾರಾಷ್ಟ್ರ ಹೂಡಿಕೆದಾರರ ಹಿತಾಸಕ್ತಿ ಪರ ಕಾಯ್ದೆ (ಎಂಪಿಐಡಿ) ಅಡಿ ಪ್ರಕರಣ ದಾಖಲಾಗಿತ್ತು.


ಮುಂಬೈನಲ್ಲಿ 50ಕ್ಕೂ ಹೆಚ್ಚು ಮಂದಿ ದೂರು ದಾಖಲಿಸಿದ್ದಾರೆ. ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ 150ಕ್ಕೂ ಹೆಚ್ಚು ಮಂದಿ ತಮಗೆ ವಂಚನೆ ಆಗಿರುವ ಬಗ್ಗೆ ದೂರು ದಾಖಲಿಸಿದ್ದರು. ಮಂಗಳೂರು ಪೊಲೀಸರು ಸೊಸೈಟಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ ಜೋಷ್ ಎಂಬವರನ್ನು ಈಗಾಗ್ಲೇ ಬಂಧಿಸಿದ್ದಾರೆ.
Malaika Credit Society owner Gilbert Baptist has been arrested by the Mumbai police for cheating investors of Rs 350 crores.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am