ಬ್ರೇಕಿಂಗ್ ನ್ಯೂಸ್
14-05-24 10:45 pm Bangalore Correspondent ಕ್ರೈಂ
ಬೆಂಗಳೂರು, ಮೇ.14: ಸೆಕೆಂಡ್ ಹ್ಯಾಂಡ್ ಕಾರು ಖರೀದಿ ಹೆಸರಲ್ಲಿ ಹಣಕ್ಕಾಗಿ ಪೀಡಿಸಿ ಮೂವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬೆತ್ತಲೆಗೊಳಿಸಿ ವಿಕೃತ ರೀತಿಯಲ್ಲಿ ಚಿತ್ರಹಿಂಸೆ ನೀಡಿದ ಘಟನೆ ಕಲಬುರ್ಗಿಯಲ್ಲಿ ನಡೆದಿದ್ದು ಚಿತ್ರಹಿಂಸೆಯ ವಿಡಿಯೋ ವೈರಲ್ ಆಗಿದೆ. ಕೃತ್ಯ ಎಸಗಿದ ಏಳು ಮಂದಿಯನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ಸೇಡಂ ತಾಲ್ಲೂಕಿನ ದೇವನೂರಿನ ಅರ್ಜುನಪ್ಪ ಹಣಮಂತ, ಮೊಹಮದ್ ಸಮೀರುದ್ದೀನ್ ಮತ್ತು ಹೀರಾಪುರದ ಅಬ್ದುಲ್ ರೆಹಮಾನ್ ಪೀಡನೆಗೆ ಒಳಗಾದವರು. ಕೋಣೆಯಲ್ಲಿ ಕೂಡಿಹಾಕಿ, ಇವರ ಗುಪ್ತಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಪೀಡಿಸುವ ಕೃತ್ಯ ಮೊಬೈಲಿನಲ್ಲಿ ವಿಡಿಯೋ ಮಾಡಿಕೊಂಡಿದ್ದು ಈ ವೇಳೆ ಪೊಲೀಸ್ ಪೇದೆಯೂ ಅಲ್ಲಿರುವುದು ಕಂಡುಬಂದಿದೆ.


ಅರ್ಜುನಪ್ಪ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದ. ಪರಿಚಯಸ್ಥ ರಮೇಶ ದೊಡ್ಡಮನಿ ಎಂಬಾತ ಕಾರು ಕೊಡಿಸುವಂತೆ ಅರ್ಜನಪ್ಪನಿಗೆ ಕೇಳಿದ್ದು ಅದರಂತೆ ₹ 6 ಲಕ್ಷದ ಕಾರು ಇದೆಯೆಂದು ಹೇಳಿ ಡೀಲ್ ಕುದುರಿಸಿದ್ದ. ಮೇ 4ರಂದು ಚಿತ್ತಾಪುರದಿಂದ ಕಾರಿನಲ್ಲಿ ಹೊರಟ ಅರ್ಜುನಪ್ಪ ಮತ್ತು ರಮೇಶ, ಕಾರು ಮಾಲೀಕ ಅಬ್ದುಲ್ ರೆಹಮಾನ್ ಹೇಳಿದ ಜಾಗಕ್ಕೆ ತೆರಳಿದ್ದರು. ಮೂವರನ್ನು ಬಳಿಕ ನಾಗನಹಳ್ಳಿ ಕ್ರಾಸ್ನಿಂದ ಹಾಗರಗಾ ರಸ್ತೆಯ ಮನೆಯೊಂದಕ್ಕೆ ಕರೆದೊಯ್ದು ಚಿತ್ರಹಿಂಸೆ ನೀಡಿದ್ದಾರೆ. ಕಾರಿನಿಂದ ಎಳೆದೊಯ್ದು ಮನೆಯ ಕೋಣೆಯಲ್ಲಿ ಕೂಡಿ ಹಾಕಿ, 10ರಿಂದ 12 ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ.
ನಾವು ಹೇಳಿದಂತೆ ಕೇಳದೆ ಇದ್ದರೆ, ಇಲ್ಲಿಂದ ಜೀವಸಹಿತ ಹೋಗುವುದಿಲ್ಲ. ಒಬ್ಬೊಬ್ಬರು ರೂ. 10 ಲಕ್ಷ ಕೊಡಬೇಕು ಎಂದು ಹೆದರಿಸಿ ಬ್ಯಾಟರಿಯಿಂದ ಗುಪ್ತಾಂಗಕ್ಕೆ ಶಾಕ್ ಕೊಟ್ಟಿದ್ದಾರೆ. ಮತೀನ್ ಸೇರಿ ಇತರೆ 12 ಮಂದಿ ಬಡಿಗೆಗಳಿಂದ ಹಲ್ಲೆ ಮಾಡಿ ತೀವ್ರವಾಗಿ ಗಾಯಗೊಳಿಸಿದ್ದು ಜತೆಗೆ ಸಿಗರೇಟ್ನಿಂದ ಸುಟ್ಟು ಗಾಯ ಮಾಡಿದ್ದಾರೆ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಇಮ್ರಾನ್ ಪಟೇಲ್ ಮೆಹಬೂಬ್ ಪಟೇಲ್, ಮಹ್ಮದ್ ಮತೀನ್ ಅಲಿಯಾಸ್ ಸ್ಟೀಲ್ ಮತೀನ್ ಅಬ್ದುಲ್ ಸಲೀಮ್, ಮಹ್ಮದ್ ಜಿಯಾ ಉಲ್ ಹುಸೇನ್ ಅಬ್ದುಲ್ ಫಜಲ್, ಮಹ್ಮದ್ ಅಬಜಲ್ ಶೇಕ್ ಅನ್ವರ್ ಶೇಖ್, ಹುಸೇನ್ ಶೇಖ್ ಮೌಲಾಶೇಖ್, ರಮೇಶ ಭೀಮಣ್ಣ ದೊಡ್ಡಮನಿ, ಸಾಗರ ಶ್ರೀಮಂತ ಕೋಳಿ ಎಂಬ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
7 arrested for torturing three men giving electric shock to private parts in Kalaburagi. Seven people were arrested here for torturing a second-hand car dealer and two others by giving electric shock to their private parts, police said on Saturday. Police arrested Imran Patel, Mohammed Mateen, Ramesh Doddamani, Sagar Koli and their accomplices.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm