ಬ್ರೇಕಿಂಗ್ ನ್ಯೂಸ್
15-05-24 10:20 am Bangalore Correspondent ಕ್ರೈಂ
ಬೆಂಗಳೂರು, ಮೇ.15: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 40 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ವಿಜಯನಗರ ಪೊಲೀಸರು ಸಿಐಡಿ ವಿಭಾಗದ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ ಸಿಐಡಿ ವಿಭಾಗದ ಮಹಿಳಾ ಪೊಲೀಸ್ ಅಧಿಕಾರಿ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸುಪರಿಡೆಂಟ್ ಆಗಿದ್ದ ಅನಿತಾ ಬಿ.ಎಸ್ ಹಾಗೂ ರಾಮಚಂದ್ರ ಭಟ್ ಬಂಧಿತರು.
ಚಿಕ್ಕಮಗಳೂರಿನ ಕಲ್ಯಾಣನಗರದ ನಿವಾಸಿ ಸುನಿಲ್ ಎಂಬವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 40 ಲಕ್ಷ ರೂ. ವಂಚನೆ ಮಾಡಿದ್ದಾರೆ. ರಾಮಚಂದ್ರ ಭಟ್ ಎನ್ನುವವರು ಸಿಐಡಿ ಇಲಾಖೆ ಅಧಿಕಾರಿ ಅನಿತಾ ಅವರನ್ನು ಭೇಟಿ ಮಾಡಿಸಿ ಪರಿಚಯ ಮಾಡಿಕೊಟ್ಟಿದ್ದಾರೆ. ಈ ವೇಳೆ ಯುವಕ ಸುನೀಲ್ಗೆ ಕೆಪಿಎಸ್ಸಿ ನೇಮಕಾತಿಯ ಮೂಲಕ ಲೋಕೋಪಯೋಗಿ (ಪಿಡಬ್ಲ್ಯೂಡಿ) ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಹುದ್ದೆಯನ್ನು ಕೊಡಿಸುವುದಾಗಿ ನಂಬಿಸಿದ್ದರು. ಹಂತ ಹಂತವಾಗಿ ಹಣ ಕೊಟ್ಟರೆ ಕೆಲಸ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವರೆಗೆ ಹಣ ಪಡೆದಿದ್ದಾರೆ. ಆದರೆ, ಕೆಲಸ ಮಾತ್ರ ಸಿಕ್ಕಿರಲಿಲ್ಲ.
ಯುವಕ ಸರ್ಕಾರಿ ಕೆಲಸ ಸಿಗಲ್ಲ ಎಂಬ ಅನುಮಾನದಲ್ಲಿ ತನ್ನ ಹಣ ಹಿಂತಿರುಗಿಸುವಂತೆ ಕೇಳಿದ್ದಾನೆ. ಆಗ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಉದ್ಯೋಗಕ್ಕೆ ವಾಮ ಮಾರ್ಗದಲ್ಲಿ ಹಣ ಕೊಟ್ಟು ಭ್ರಷ್ಟಾಚಾರ ಮಾಡಿದ ಆರೋಪದಡಿ ನಿನ್ನನ್ನು ಜೈಲಿಗೆ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಯುವಕ ಸುನೀಲ್ ಮನೆಯವರ ಒತ್ತಾಸೆ ಮೇರೆಗೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾನೆ. ಆರೋಪಿಗಳು ಇದೇ ರೀತಿ ಬೇರೆ ಇಬ್ಬರಿಗೂ ವಂಚನೆ ಮಾಡಿದ್ದು ಕೋಟಿಗೂ ಹೆಚ್ಚು ವಂಚನೆ ಮಾಡಿರುವುದಾಗಿ ತನಿಖೆಯಲ್ಲಿ ಪತ್ತೆಯಾಗಿದೆ.
Two CID staffs arrested for cheating people in the name of government jobs in Bangalore. Anita BS and Ramachandra Bhatt, who were working as section superintendents in Bengaluru’s CID unit, have been arrested in this connection, informed the police.
25-03-26 03:25 pm
HK News Staffer
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 05:23 pm
HK News Staffer
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm