ಬ್ರೇಕಿಂಗ್ ನ್ಯೂಸ್
15-05-24 10:20 am Bangalore Correspondent ಕ್ರೈಂ
ಬೆಂಗಳೂರು, ಮೇ.15: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 40 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ವಿಜಯನಗರ ಪೊಲೀಸರು ಸಿಐಡಿ ವಿಭಾಗದ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ ಸಿಐಡಿ ವಿಭಾಗದ ಮಹಿಳಾ ಪೊಲೀಸ್ ಅಧಿಕಾರಿ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸುಪರಿಡೆಂಟ್ ಆಗಿದ್ದ ಅನಿತಾ ಬಿ.ಎಸ್ ಹಾಗೂ ರಾಮಚಂದ್ರ ಭಟ್ ಬಂಧಿತರು.
ಚಿಕ್ಕಮಗಳೂರಿನ ಕಲ್ಯಾಣನಗರದ ನಿವಾಸಿ ಸುನಿಲ್ ಎಂಬವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 40 ಲಕ್ಷ ರೂ. ವಂಚನೆ ಮಾಡಿದ್ದಾರೆ. ರಾಮಚಂದ್ರ ಭಟ್ ಎನ್ನುವವರು ಸಿಐಡಿ ಇಲಾಖೆ ಅಧಿಕಾರಿ ಅನಿತಾ ಅವರನ್ನು ಭೇಟಿ ಮಾಡಿಸಿ ಪರಿಚಯ ಮಾಡಿಕೊಟ್ಟಿದ್ದಾರೆ. ಈ ವೇಳೆ ಯುವಕ ಸುನೀಲ್ಗೆ ಕೆಪಿಎಸ್ಸಿ ನೇಮಕಾತಿಯ ಮೂಲಕ ಲೋಕೋಪಯೋಗಿ (ಪಿಡಬ್ಲ್ಯೂಡಿ) ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಹುದ್ದೆಯನ್ನು ಕೊಡಿಸುವುದಾಗಿ ನಂಬಿಸಿದ್ದರು. ಹಂತ ಹಂತವಾಗಿ ಹಣ ಕೊಟ್ಟರೆ ಕೆಲಸ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವರೆಗೆ ಹಣ ಪಡೆದಿದ್ದಾರೆ. ಆದರೆ, ಕೆಲಸ ಮಾತ್ರ ಸಿಕ್ಕಿರಲಿಲ್ಲ.
ಯುವಕ ಸರ್ಕಾರಿ ಕೆಲಸ ಸಿಗಲ್ಲ ಎಂಬ ಅನುಮಾನದಲ್ಲಿ ತನ್ನ ಹಣ ಹಿಂತಿರುಗಿಸುವಂತೆ ಕೇಳಿದ್ದಾನೆ. ಆಗ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಉದ್ಯೋಗಕ್ಕೆ ವಾಮ ಮಾರ್ಗದಲ್ಲಿ ಹಣ ಕೊಟ್ಟು ಭ್ರಷ್ಟಾಚಾರ ಮಾಡಿದ ಆರೋಪದಡಿ ನಿನ್ನನ್ನು ಜೈಲಿಗೆ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಯುವಕ ಸುನೀಲ್ ಮನೆಯವರ ಒತ್ತಾಸೆ ಮೇರೆಗೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾನೆ. ಆರೋಪಿಗಳು ಇದೇ ರೀತಿ ಬೇರೆ ಇಬ್ಬರಿಗೂ ವಂಚನೆ ಮಾಡಿದ್ದು ಕೋಟಿಗೂ ಹೆಚ್ಚು ವಂಚನೆ ಮಾಡಿರುವುದಾಗಿ ತನಿಖೆಯಲ್ಲಿ ಪತ್ತೆಯಾಗಿದೆ.
Two CID staffs arrested for cheating people in the name of government jobs in Bangalore. Anita BS and Ramachandra Bhatt, who were working as section superintendents in Bengaluru’s CID unit, have been arrested in this connection, informed the police.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm